DistrictsPolitics

ಕೊಲ್ಲೂರಿನಲ್ಲಿ ನವಚಂಡಿಕಾ ಯಾಗ ಮಾಡಿಸಿದ ಡಿ.ಕೆ.ಶಿವಕುಮಾರ್‌

ಕೊಲ್ಲೂರು; ಡಿ.ಕೆ.ಶಿವಕುಮಾರ್‌ ಅವರು ಪತ್ನಿ ಉಷಾ ಸಮೇತವಾಗಿ ಇಂದು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಅವರು ನವ ಚಂಡಿಕಾಯಾಗ ಮಾಡಿಸಿ, ಸಂಕಲ್ಪ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್‌ ಈ ಬಾರಿ ಸಿಎಂ ಹುದ್ದೆಯ ಆಕಾಂಕ್ಷಿಗಳಲ್ಲೊಬ್ಬರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಮಾಡಿಸಿರುವ ಚಂಡಿಕಾಯಾಗದ ಬಗ್ಗೆ ಚರ್ಚೆ ನಡೆದಿದೆ. ಇನ್ನು ಈ ಯಾಗದ ವೇಳೆ ಅರ್ಚಕರು ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಹುದ್ದೆ ಪ್ರಾಪ್ತಿಯಾಗಲಿ ಎಂದು ಹಾರೈಸಿದ್ದಾರೆ ಎಂದು ಹೇಳಲಾಗಿದೆ.

Share Post