BengaluruPolitics

ಹಂದಿಯೊಂದಿಗೆ ಗುದ್ದಾಡಬಾರದು; HDK ವಿರುದ್ಧ ರೊಚ್ಚಿಗೆದ್ದ ADGP ಚಂದ್ರಶೇಖರ್

ಬೆಂಗಳೂರು; ಲೋಕಾಯುಕ್ತ adgp ಚಂದ್ರಶೇಖರ್ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಮಾಡಿದ್ದರು. ಇದರಿಂದ ಕೆರಳಿದ ಚಂದ್ರಶೇಖರ್, ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.. ಅವರ ನೇತೃತ್ವದ SIT ತಂಡಕ್ಕೆ ಪತ್ರ ಬರೆದಿರುವ ADGP ಚಂದ್ರಶೇಖರ್, ಕುಮಾರಸ್ವಾಮಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ..

   ‘ಹಂದಿಯೊಂದಿಗೆ ಗುದ್ದಾಡಬಾರದು ‘ ಎಂಬ ಜಾರ್ಜ್‌ ಬರ್ನಾರ್ಡ್ ಷಾ ಅವರ ಮಾತನ್ನು ಪತ್ರದಲ್ಲಿ ಚಂದ್ರಶೇಖರ್ ಉಲ್ಲೇಖಿಸಿದ್ದಾರೆ. ಈ ಮೂಲಕ ಕುಮಾರಸ್ವಾಮಿಯವರನ್ನು ಹಂದಿಗೆ ಹೋಲಿಸಿದ್ದಾರೆ.. ಇದು ಚರ್ಚೆಗೆ ಕಾರಣವಾಗಿದೆ.  “ಹಂದಿಗಳೊಂದಿಗೆ ಎಂದಿಗೂ ಜಗಳಕ್ಕೆ ಇಳಿಯಬೇಡಿ, ಹಂದಿಗಳ ಜೊತೆಗೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೀವಿ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತದೆ” ಎಂದು ಚಂದ್ರಶೇಖರ್ ಪತ್ರದಲ್ಲಿ ಬರೆದುಕೊಂಡಿದ್ದಾರೆ..

  ಕುಮಾರಸ್ವಾಮಿಯವರು ನಮಗೆ ಭಯ ಹುಟ್ಟಿಸುವ ಉದ್ದೇಶ ಹೊಂದಿದ್ದಾರೆ. ಎಷ್ಟೇ ಉನ್ನತ ಸ್ಥಾನದಲ್ಲಿದ್ರು ಆತನೊಬ್ಬ ಆರೋಪಿ. ಇಂತಹ ಬೆದರಿಕೆಗಳಿಂದ ನಾವು ನಿರಾಶೆಗೊಳ್ಳಬಾರದು ಎಂದೂ ಚಂದ್ರಶೇಖರ್ ಪತ್ರದಲ್ಲಿ ಬರೆದುಕೊಂಡಿದ್ದಾರೆ..

  ಗಂಗೇನಹಳ್ಳಿಯಲ್ಲಿ 1.11 ಎಕರೆ ಜಮೀನನ್ನು ಡಿನೋಟಿಫೈ ಮಾಡಿದ ಪ್ರಕರಣದಲ್ಲಿ ತಮ್ಮನ್ನು ವಿಚಾರಣೆ ಮಾಡಿದ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹಲವಾರು ಆರೋಪಗಳನ್ನು ಮಾಡಿದ್ದರು.

Share Post