DistrictsPolitics

ರೈತರಿಗೆ ಬಂಪರ್ ಆಫರ್; ಸಾಲ ಕಟ್ಟಿದರೆ ಬಡ್ಡಿ ಮನ್ನಾ

ಬೆಳಗಾವಿ; ರೈತರು ಸಹಕಾರಿ‌‌‌ ಬ್ಯಾಂಕ್ ಗಳಲ್ಲಿ ಮಾಡಿರುವ ಸಾಲದ ಅಸಲು ತೀರಿಸಿದರೆ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಹಕಾರಿ ಬ್ಯಾಂಕ್ ಗಳಲ್ಲಿನ ದೀರ್ಘಾವಧಿ ಹಾಗೂ ಮಧ್ಯಮಾವಧಿಯ ಸಾಲದ ಅಸಲನ್ನು ತೀರಿಸಿದರೆ, ಎಷ್ಟೇ ಬಡ್ಡಿಯಾಗಿದ್ದರೂ ಮನ್ನಾ ಮಾಡಲಾಗುತ್ತದೆ ಎಂದಿದ್ದಾರೆ.

ಇದಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ರೈತರು ಸಾಲ ಕಟ್ಟೋದಿಲ್ಲ. ನೀವು ಬಡ್ಡಿ ಮನ್ನಾ ಮಾಡೋದಿಲ್ಲ ಎಂದು ಹೇಳಿದ್ದಾರೆ. ಬರದಿಂದ ರೈತರು ಕಂಗೆಟ್ಟಿದ್ದಾರೆ. ಹೀಗಾಗಿ ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ನೀಡಬೇಕು. 2 ಲಕ್ಷದವರೆಗೆ ರೈತರ ಸಾಲ ಮನ್ನಾ ಮಾಡಬೇಕು ಎಂದು ಅಶೋಕ್ ಆಗ್ರಹಿಸಿದರು.

Share Post