BengaluruPolitics

ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲು!

ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಶುರುವಾಗಿದೆ.. ಮುಡಾ ಸೈಟ್‌ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೋರ್ಟ್‌ನಲ್ಲಿ ಖಾಸಗಿ ದೂರೊಂದು ದಾಖಲಿಸಲಾಗಿದೆ.

ಇದನ್ನೂ ಓದಿ; ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಸಮನ್ಸ್‌; ಖುದ್ದು ಹಾಜರಿಗೆ ಸೂಚನೆ!

ಮೈಸೂರಿನ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವವರು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಈ ದೂರು ದಾಖಲಿಸಿದ್ದಾರೆ.. ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಮ್ಮ, ಮಲ್ಲಿಕಾರ್ಜುನ್, ನಿಂಗಾ (ಜವರ) ಮತ್ತು ಇನ್ನಿತರರ ವಿರುದ್ಧ‌ ಈ ದೂರು ನೀಡಲಾಗಿದೆ.. ಆದ್ರೆ ಈ ದೂರನ್ನು ವಿಚಾರಣೆಗೆ ಸ್ವೀಕಾರ ಮಾಡಬೇಕೇ ಬೇಡವೇ ಎಂಬ ಬಗ್ಗೆ ನಾಳೆ ಕೋರ್ಟ್‌ನಲ್ಲಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ; ಬೆಂಗಳೂರಿನಲ್ಲಿ ನಾಪತ್ತೆಯಾದ 485 ಹುಡುಗಿಯರ ಪತ್ತೆಯೇ ಇಲ್ಲ!

Share Post