BengaluruPolitics

ಪಂಚ ಗ್ಯಾರಂಟಿ ಸಮೀಕ್ಷೆ; ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು; ರಾಜ್ಯದಲ್ಲಿ ಲೋಕಸಭಾ ಚುನಾವಣೆಯನ್ನು ಗೆಲ್ಲವು ಕಾಂಗ್ರೆಸ್‌ ಪಂಚ ಗ್ಯಾರೆಂಟಿಗಳನ್ನೇ ನಂಬಿಕೊಂಡಿದೆ. ಈ ಯೋಜನೆಗಳು ಸರಿಯಾಗಿ ಅನುಷ್ಠಾನವಾದರೆ ಕಾಂಗ್ರೆಸ್‌ಗೆ ಲಾಭವಾಗುತ್ತೆ ಅನ್ನೋ ಲೆಕ್ಕಾಚಾರ ಕಾಂಗ್ರೆಸ್‌ ನಾಯಕರದ್ದು.. ಹೀಗಾಗಿ ಗ್ಯಾರೆಂಟಿಗಳು ಸರಿಯಾಗಿ ಜನರಿಗೆ ತಲುಪುತ್ತಿವೆಯೇ ಎಂಬುದರ ಜುರಿತು ಸಮೀಕ್ಷೆಗಳು ನಡೆಯುತ್ತಿವೆ. ಮಾರ್ಚ್‌ 3ರವರೆಗೆ ಸಮೀಕ್ಷೆಗಳು ನಡೆಯಲಿವೆ.

ಇದನ್ನೂ ಓದಿ; Bommai; ಕಾಂಗ್ರೆಸ್‌ ಅವಧಿಯಲ್ಲೇ ರಾಜ್ಯಗಳಿಗೆ ಹೆಚ್ಚು ಅನ್ಯಾಯವಾಗಿದೆ; ಬಸವರಾಜ ಬೊಮ್ಮಾಯಿ‌

ಗ್ಯಾರೆಂಟಿ ಯೋಜನೆಗಳ ಸಮೀಕ್ಷೆ;

ಗ್ಯಾರೆಂಟಿ ಯೋಜನೆಗಳ ಸಮೀಕ್ಷೆ; ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಪಂಚ ಗ್ಯಾರಂಟಿ ಯೋಜನೆಗಳ ಸಮೀಕ್ಷೆಯು ಇದೇ ಸೋಮವಾರದಿಂದ (ಫೆ.26) ಮಾರ್ಚ್ 3 ರವರೆಗೆ ರಾಜ್ಯಾದ್ಯಂತ ನಡೆಯಲಿದೆ. ಇದರಿಂದಾಗಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸ್ಪಷ್ಟ ಚಿತ್ರಣ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್‌;

ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್‌; ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮೊಬೈಲ್/ವೆಬ್ ತಂತ್ರಾಂಶದ ಮೂಲಕ ಸಮೀಕ್ಷೆ (ಜಿಎಸ್‌ಎಸ್) ನಡೆಸುವ ಸಂಬಂಧ ಇಂದು ವಿಕಾಸ ಸೌಧದಿಂದ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ (ಸಿಇಒ) ವಿಡಿಯೋ ಕಾನ್ಫರೆನ್ಸ್ ನಡೆಸಲಾಯಿತು. ಯೋಜನೆಗಳು ತಲುಪಿರುವ ಮತ್ತು ತಲುಪದಿರುವ ಕುಟುಂಬಗಳ ಸರ್ವೆ ನಡೆಸುತ್ತಿದ್ದು, ಈ ಮೂಲಕ ಯೋಜನೆ ತಲುಪದ ಕುಟುಂಬಗಳ ಸಂಖ್ಯೆ ಮತ್ತು ಕಾರಣ ತಲುಪಲಿದೆ ಎಂದರು.

ಇದನ್ನೂ ಓದಿ; Dubai; ದುಬೈನಿಂದ ಭಾರತೀಯರಿಗೆ ಶುಭ ಸುದ್ದಿ; ಮಲ್ಟಿಪಲ್‌ ಎಂಟ್ರಿ ವೀಸಾ


ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಸರ್ವೆ ಕಾರ್ಯ ನಡೆಸಲಿದ್ದು, ಯೋಜನೆಯ ಲಾಭ ಪಡೆದಿರುವ ಹಾಗೂ ಪಡೆಯದ ಕುಟುಂಬಗಳ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಸಚಿವರು ತಿಳಿಸಿದರು. ಈ ವೇಳೆ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ನಿರ್ದೇಶಕರಾದ ಎಂ.ಎಸ್.ಅರ್ಚನಾ ಸೇರಿದಂತೆ ಇ-ಗವರ್ನೆಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ;Neera; ಮೇಲ್ಮನೆಯಲ್ಲಿ ನೀರಾ ಬಗ್ಗೆ ಮಾತು; ಡಿಸಿಎಂ ಡಿಕೆಶಿ ಪ್ರಸ್ತಾಪದಿಂದ ಸ್ವಾರಸ್ಯಕರ ಚರ್ಚೆ

Share Post