Politics

Gandhi Family; ಸೋನಿಯಾ ರಾಜ್ಯಭೆಗೆ, ಪ್ರಿಯಾಂಕಾ ರಾಯ್‌ಬರೇಲಿಗೆ!

ನವದೆಹಲಿ; ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಈ ಬಾರಿ ಲೋಕಸಭಾ ಅಖಾಡಕ್ಕಿಳಿಯೋದು ಬಹುತೇಕ ಡೌಟು. ಅನಾರೋಗ್ಯದ ಕಾರಣದಿಂದ ಅವರು ಚುನಾವಣಾ ಕಣದಿಂದ ಹಿಂದೆ ಸರಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ರಾಜ್ಯಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಲಾಗಿದೆ. ಹೀಗಾಗಿ ಸೋನಿಯಾ ಅವರು ಯಾವುದಾದರೂ ಒಂದು ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗುತ್ತಾರೆ ಎಂದು ಹೇಳಲಾಗುತ್ತಿದೆ. ಇನ್ನು ಗಾಂಧಿ ಕುಟುಂಬಕ್ಕೆ ಭದ್ರಕೋಟೆಯಾಗಿದ್ದ ರಾಯ್‌ ಬರೇಲಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ ಪುತ್ರಿ ಹಾಗೂ ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ; R.ASHOK; ರಾಜ್ಯಪಾಲರ ಬಾಯಲ್ಲಿ ಕಾಂಗ್ರೆಸ್‌ ಸುಳ್ಳು ಹೇಳಿಸಿದೆ; ಆರ್‌.ಅಶೋಕ್‌

ರಾಜಸ್ಥಾನದಿಂದ ರಾಜ್ಯಸಭೆಗೆ ಹೋಗ್ತಾರಾ ಸೋನಿಯಾ..?;

ಸೋನಿಯಾ ಗಾಂಧಿ ಅವರು ಈ ಬಾರಿ ರಾಜಸ್ಥಾನದಿಂದ ರಾಜ್ಯಸಭೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಹೇಳಿವೆ. ಪ್ರಸ್ತುತ ಉತ್ತರ ಪ್ರದೇಶದ ರಾಯಬರೇಲಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ 77 ವರ್ಷದ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಕಾರಣದಿಂದಾಗಿ ಚುನಾವಣಾ ಪ್ರಚಾರ ಸಭೆಗಳು ಮತ್ತು ರ್ಯಾಲಿಗಳಲ್ಲಿ ಭಾಗವಹಿಸುವ ಸ್ಥಿತಿಯಲ್ಲಿಲ್ಲ. ಆದ್ದರಿಂದ ಅವರು ರಾಜ್ಯಸಭೆ ಮೂಲಕ ಸಂಸತ್‌ ಪ್ರವೇಶಿಸಲು ತೀರ್ಮಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.  ವಯಸ್ಸು ಮತ್ತು ಆರೋಗ್ಯವೇ ಇದಕ್ಕೆ ಕಾರಣ.

ಇದನ್ನು ಓದಿ; Ashok chauhan; ಕಾಂಗ್ರೆಸ್ ಪಕ್ಷಕ್ಕೆ ಅಶೋಕ್ ಚೌಹಾಣ್ ಗುಡ್ ಬೈ

ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿಯುತ್ತಾರಾ ಪ್ರಿಯಾಂಕಾ..?;

ಇನ್ನು 2019ರ ಜನವರಿಯಲ್ಲಿ ರಾಜಕೀಯ ಪ್ರವೇಶಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅದೇ ವರ್ಷ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಎಲ್ಲರ ನಿರೀಕ್ಷೆಗೆ ವ್ಯತಿರಿಕ್ತವಾಗಿ ಪ್ರಚಾರ ಕಾರ್ಯಕ್ಕಷ್ಟೇ ಸೀಮಿತವಾಗಿದ್ದರು.
ಆಗ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಉತ್ತರ ಪ್ರದೇಶದ ಉಸ್ತುವಾರಿಯನ್ನಾಗಿ ನೇಮಿಸಿದ್ದರು. ಇದೀಗ ಸೋನಿಯಾಗಾಂಧಿ ಈ ಬಾರಿ ರಾಯ್ ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಯುವುದು ಬಹುತೇಕ ಡೌಟು. ಹೀಗಾಗಿ ಆ ಕ್ಷೇತ್ರವನ್ನು ಪ್ರಿಯಾಂಕಾ ಗಾಂಧಿಗೆ ಬಿಟ್ಟುಕೊಡುವ ಸಾಧ್ಯತೆ ಇದೆ.,  ಪ್ರಿಯಾಂಕಾ ಗಾಂಧಿ ವಾದ್ರಾ 2024 ರ ಚುನಾವಣೆಯಲ್ಲಿ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸೋದು ಬಹುತೇಕ ಪಕ್ಕಾ.

ಇದನ್ನೂ ಓದಿ; Budget Session; ಇಂದಿನಿಂದ ರಾಜ್ಯ ಬಜೆಟ್‌ ಅಧಿವೇಶನ; ಪ್ರತಿಪಕ್ಷಗಳ ಅಸ್ತ್ರಗಳೇನು..?

ಅಭಿಷೇಕ್‌ ಮನು ಸಿಂಘ್ವಿ ಕರ್ನಾಟಕದಿಂದ ರಾಜ್ಯಸಭೆಗೆ!;

ಕಾಂಗ್ರೆಸ್ ನಾಯಕ ಹಾಗೂ ವಕೀಲ ಅಭಿಷೇಕ್ ಮನು ಸಿಂಘ್ವಿ ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಇದುವರೆಗೆ ರಾಜ್ಯಸಭಾ ಸದಸ್ಯರಾಗಿದ್ದ ನಾಸೀರ್ ಹುಸೇನ್ ಅವರಿಗೆ ಮತ್ತೆ ಟಿಕೆಟ್ ನೀಡಲಾಗುವುದು. ಅಜಯ್ ಮಾಕೆನ್ ಅವರನ್ನೂ ರಾಜ್ಯಸಭೆಗೆ ಕಳುಹಿಸುವ ಸಾಧ್ಯತೆ ಹೆಚ್ಚಿದೆ ಎಂಬ ವರದಿಗಳಿವೆ. ರಾಜ್ಯಸಭಾ ಅಭ್ಯರ್ಥಿಗಳ ಹೆಸರನ್ನು ಒಂದೆರೆಡು ದಿನದಲ್ಲಿ ಕಾಂಗ್ರೆಸ್‌ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.

ಫೆಬ್ರವರಿ 27ಕ್ಕೆ ರಾಜ್ಯಸಭಾ ಚುನಾವಣೆ;

ಜನವರಿ 29 ರಂದು ರಾಜ್ಯಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ತೆರವಾಗಲಿರುವ 56 ರಾಜ್ಯಸಭಾ ಸ್ಥಾನಗಳಿಗೆ ಇದೇ ತಿಂಗಳ 27ರಂದು ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ. ಇದಕ್ಕಾಗಿ ಇದೇ ತಿಂಗಳ 15ಕ್ಕೆ ನಾಮಪತ್ರ ಸಲ್ಲಿಸಲು ಗಡುವು ಮುಕ್ತಾಯವಾಗಲಿದ್ದು, ಮರುದಿನ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಇದೇ ತಿಂಗಳ 20 ಕೊನೆಯ ದಿನಾಂಕವಾಗಿದ್ದು, ಇದೇ 27 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಸಂಜೆ 5 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ; Amith sha; ಜೆಡಿಎಸ್‌ ಮೈತ್ರಿಗೆ ಬಗ್ಗೆ ಅಪಸ್ವರ; ಎಚ್ಚರಿಕೆ ಕೊಟ್ಟ ಅಮಿತ್‌ ಶಾ!

Share Post