BengaluruPolitics

ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ; ಚಂದ್ರಶೇಖರ ಸ್ವಾಮೀಜಿ

ಬೆಂಗಳೂರು; ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಮನವಿ ಮಾಡಿದ್ದಾರೆ.. ಸಿಎಂ ಸಿದ್ದರಾಮಯ್ಯ ಅವರಿದ್ದ ವೇದಿಕೆಯಲ್ಲೇ ಮಾತನಾಡಿರುವ ಸ್ವಾಮೀಜಿ, ನಿಮಗೆ ಅನುಭವ ಇದೆ, ಈಗ ಡಿ.ಕೆ.ಶಿವಕುಮಾರ್‌ ಅವರಿಗೆ ಅವಕಾಶ ಮಾಡಿಕೊಡಿ ಎಂದಿದ್ದಾರೆ..

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕೆಂಪೇಗೌಡ ಜಯಂತಿ ಹಮ್ಮಿಕೊಳ್ಳಲಾಗಿತ್ತು.. ಇದರ ಭಾಗವಹಿಸಿದ್ದ ಸ್ವಾಮೀಜಿ, ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗಬೇಕು.. ಇದು ಸಿದ್ದರಾಮಯ್ಯ ಅವರು ಮನಸು ಮಾಡಿದರೆ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ.. ಇನ್ನು ಕಾರ್ಯಕ್ರಮದ ನಂತರವೂ ಇದನ್ನೇ ಮಾತನಾಡಿರುವ ಸ್ವಾಮೀಜಿ, ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್‌ ಅವರು ಹಣ ಖರ್ಚು ಮಾಡಿದ್ದಾರೆ.. ಹೋರಾಡಿದ್ದಾರೆ.. ಆದ್ರೆ ಸಿದ್ದರಾಮಯ್ಯ ಸುಮ್ಮನೆ ಇದ್ದು ಅಧಿಕಾರಕ್ಕೆ ಬಂದಿದ್ದಾರೆ ಎಂದಿದ್ದಾರೆ..

 

Share Post