Politics

ನಾನು ಇನ್ಮುಂದೆ ಕಣ್ಣೀರು ಹಾಕಲ್ಲ : H D Kumar Swamy

HD Kumaraswamy : ನಾನು ಮೈತ್ರಿ ಮಾಡಿಕೊಳ್ಳುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ನಮ್ಮ ಪಕ್ಷದ ಖಜಾನೆ ಹಣದ ಮೂಲಕ ತುಂಬಿಲ್ಲ. ಬದಲಾಗಿ ಜನರ ಪ್ರೀತಿ ವಿಶ್ವಾಸದಿಂದ ಖಜಾನೆ ತುಂಬಿದೆ. ಅದೂ ಅಲ್ಲದೆ ಯಾವ ಪಕ್ಷವೂ ನಮ್ಮ ಬೆಂಬಲವನ್ನು ಕೋರಿಲ್ಲ. ಆದರೆ ನಮ್ಮ ಅಭ್ಯರ್ಥಿ ಇಲ್ಲದ ಕಡೆ ಬಿ.ಎಸ್.ಯಡಿಯೂರಪ್ಪ ಸಹಕಾರ ಕೋರಿದ್ದಾರೆ. ನಮ್ಮ ಅಭ್ಯರ್ಥಿಗೆ ಬಿಜೆಪಿಯವರು ಸಹಕರಿಸುತ್ತಿಲ್ಲ

ನಾನು ಇನ್ಮುಂದೆ ಕಣ್ಣೀರು ಹಾಕಬಾರದು ಎಂದು ನಿರ್ಧರಿಸಿದ್ದೇನೆ. ಹಾಗೆಂದ ಮಾತ್ರಕ್ಕೆ ನಾನು ಕಟುಕ ಹೃದಯವನ್ನು ಹೊಂದಿದವನು ಎಂದರ್ಥವಲ್ಲ. ಜನರ ಕಷ್ಟವನ್ನು ಭಾವನಾತ್ಮಕವಾಗಿ ನೋಡಿದಾಗ ನಮ್ಮ ಹೃದಯ ಮಿಡಿಯುತ್ತೆ. ನಾನು ಸಿಎಂ ಆಗಿದ್ದಾಗ ಕನಗನಮರಡಿ ಬಸ್ ದುರಂತ ನಡೆಯಿತು. ಅದನ್ನ ನೋಡಿ ನನ್ನ ಕಣ್ಣಲ್ಲಿ ನೀರು ಬಂತು. ಕೆಲವರು ಅದನ್ನೇ ಟವಲ್​ನಲ್ಲಿ ಗ್ಲಿಸ್​ರಿನ್​ ಹಾಕ್ಕೊಂಡು ಅಳ್ತಾರೆ ಎಂದು ಹೇಳಿದ್ದರು, ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಅಸಮಧಾನ ಹೊರಹಾಕಿದ್ದಾರೆ.

Share Post