Politics

ಇಬ್ರಾಹಿಂ ಜೆಡಿಎಸ್‌ಗೆ ಬರುವುದಾದರೆ ಮುಕ್ತ ಆಹ್ವಾನ; ಹೆಚ್ಡಿಕೆ

ಬೆಂಗಳೂರು: ಸಿ.ಎಂ.ಇಬ್ರಾಹಿಂ ಅವರ ಜೊತೆ ನಾನು ಬೆಳಗ್ಗೆಯೇ ಮಾತನಾಡಿದ್ದೇವೆ. ಅವರು ಜೆಡಿಎಸ್‌ ಪಕ್ಷಕ್ಕೆ ಬರುವುದಾದರೆ ಮುಕ್ತ ಆಹ್ವಾನವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಬೆಳಗ್ಗೆ ಸಿ.ಎಂ.ಇಬ್ರಾಹಿಂ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳುತ್ತಿರುವುದಾಗಿ ಹೇಳಿದ್ದರು. ಜೊತೆಗೆ ದೇವೇಗೌಡರ ಸಲಹೆ ಪಡೆದು ಮುಂದಿನ ರಾಜಕೀಯ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದರು. ಈ ಬೆನ್ನಲ್ಲೇ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಇಬ್ರಾಹಿಂ ಅವರಿಗೆ ಜೆಡಿಎಸ್‌ ಮೇಲೆ ವ್ಯಾಮೋಹವಿದೆ. ಹೀಗಾಗಿ ಅವರು ಜೆಡಿಎಸ್‌ ಸೇರುವುದಾದರೆ, ಅವರಿಗೆ ಮುಕ್ತ ಆಹ್ವಾನವಿದೆ ಎಂದು ಹೇಳಿದ್ದಾರೆ.

 

Share Post