NationalPolitics

ಡಿಸೆಂಬರ್‌ 6ರಂದು INDIA ಮೈತ್ರಿಕೂಟದ ಸಭೆ

ನವದೆಹಲಿ; ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ತೆಲಂಗಾಣದಲ್ಲಿ ಕಾಂಗ್ರೆಸ್‌ ಉತ್ತಮ ಪ್ರದರ್ಶನ ನೀಡಿದೆ. ಆದ್ರೆ ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿ ಮುಂದೆ ಇದೆ. ಈ ನಡುವೆ ಲೋಕಸಭಾ ಚುನಾವಣೆ ಕಡೆ ಕಾಂಗ್ರೆಸ್‌ ಗಮನ ಕೊಟ್ಟಂತೆ ಕಾಣುತ್ತಿದೆ. ಡಿಸೆಂಬರ್‌ 6ರಂದು INDIA ಮೈತ್ರಿಕೂಟದ ನಾಯಕರ ಸಭೆ ಕರೆಲಾಗಿದೆ.

ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆಗೆ ಆಹ್ವಾನ ನೀಡಿದ್ದು, ದೆಹಲಿಯಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢ, ತೆಲಂಗಾಣ ಈ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ನಾಳೆ ಮಿಜೋರಾಮ್‌ ಫಲಿತಾಂಶ ಇದೆ. ಈಗಾಲೇ ನಾಲ್ಕು ರಾಜ್ಯಗಳ ಫಲಿತಾಂಶ ಗೊತ್ತಾಗಿದೆ.

Share Post