NationalNewsPolitics

ಕರ್ನಾಟಕದಲ್ಲಿ ಭಾರತ್‌ ರಾಷ್ಟ್ರ ಸಮಿತಿ ಸ್ಪರ್ಧೆ; ತೆಲಂಗಾಣ ಸಿಎಂ

ಹೈದರಾಬಾದ್‌; ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತ ರಾಷ್ಟ್ರ ಸಮಿತಿ ಸ್ಪರ್ಧೆ ಮಾಡಲಿದೆ ಎಂದು ತೆಲಂಗಾಣ ಸಿಎಂ ಚಂದ್ರಶೇಖರ ರಾವ್‌ ಹೇಳಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಭಾರತ ರಾಷ್ಟ್ರ ಸಮಿತಿ ಪಕ್ಷದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಪಕ್ಷ ಕರ್ನಾಟಕದಲ್ಲಿ ಸ್ಪರ್ಧೆ ಮಾಡಲಿದೆ. ಕರ್ನಾಟಕದಲ್ಲಿ ಕುಮಾರಸ್ವಾಮಿಯವರು ಸಿಎಂ ಆಗಬೇಕು. ಅದಕ್ಕೆ ನಮ್ಮ ಬೆಂಬಲವಿದೆ ಎಂದು ಚಂದ್ರಶೇಖರರಾವ್‌ ತಿಳಿಸಿದರು. ಕರ್ನಾಟಕ ಹಾಗೂ ತೆಲಂಗಾಣ ಗಡಿಯಲ್ಲಿ ತೆಲುಗು ಜನರಿದ್ದಾರೆ. ಅಲ್ಲಿ ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಉಳಿದೆಡೆ ಜೆಡಿಎಸ್‌ನ್ನು ಬೆಂಬಲಿಸುತ್ತೇವೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಪಾಲ್ಗೊಂಡಿದ್ದರು.

Share Post