Politics

ಅಪೇಕ್ಷೆ ವ್ಯಕ್ತಪಡಿಸುವ ಅಧಿಕಾರ ಶಾಸಕರಿಗಿದೆ; ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಮಂಗಳೂರು: ಸಚಿವ ಸ್ಥಾನಕ್ಕಾಗಿ ಅಪೇಕ್ಷೆ ವ್ಯಕ್ತಪಡಿಸುವ ಅಧಿಕಾರ ನಮ್ಮ ಶಾಸಕರಿಗಿದೆ. ಆದ್ರೆ ಸಚಿವ ಸ್ಥಾನ ಕೊಡುವುದು, ಬಿಡುವುದು ಮುಖ್ಯಮಂತ್ರಿಗೆ ಬಿಟ್ಟಿರುತ್ತದೆ. ಪಕ್ಷದ ವರಿಷ್ಠರು ಹಾಗೂ ರಾಜ್ಯ ಬಿಜೆಪಿ ಇದಕ್ಕೆ ಅಂತಿಮ ರೂಪ ಕೊಡುತ್ತದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಂಪುಟ ವಿಸ್ತರಣೆ ಮಾಡುವುದು ಅಥವಾ ಸಂಪುಟ ಪುನಾರಚನೆ ಮಾಡುವ ಅಧಿಕಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗಿದೆ. ಈ ಬಗ್ಗೆ ತೀರ್ಮಾನ ಕೈಗೊಳ್ಳುವುದು ಅವರಿಗೆ ಬಿಟ್ಟಿದ್ದು. ನಮ್ಮ ಪಕ್ಷದಲ್ಲಿ ಯಾವ ವಿಚಾರದಲ್ಲೂ ಗೊಂದಲಗಳಿಲ್ಲ ಎಂದು ಹೇಳಿದರು.

ಕೆಲ ಶಾಸಕರು ಸಚಿವ ಸ್ಥಾನ ನೀಡಬೇಕೆಂದು ಕೇಳುತ್ತಿದ್ದಾರೆ. ಬಹಿರಂಗವಾಗಿ ಅವರು ಹೇಳಿಕೆಗಳನ್ನೂ ನೀಡುತ್ತಿದ್ದಾರೆ. ಪ್ರತಿಯೊಬ್ಬರಿಗೂ ಸಚಿವರಾಗಬೇಕೆಂಬ ಆಸೆ ಇರುತ್ತದೆ. ಅದನ್ನು ಅವರು ವ್ಯಕ್ತಪಡಿಸುತ್ತಿದ್ದಾರೆ. ಅದು ಯಾವುದೇ ಕಾರಣಕ್ಕೂ ತಪ್ಪಾಗುವುದಿಲ್ಲ. ಆದರೆ ಯಾರಿಗೆ ಸಚಿವ ಸ್ಥಾನ ಕೊಡಬೇಕು, ಕೈಬಿಡುವುದಾದರೆ ಯಾರನ್ನು ಕೈಬಿಡಬೇಕು ಎಂಬುದನ್ನು ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಖೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Share Post