BengaluruPolitics

ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ; ವಿಜಯೇಂದ್ರ

ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರು ಭಂಡತನ ಬಿಟ್ಟು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ ಮಾಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಕಾನೂನು ಕುಣಿಕೆಯಿಂದ ಪಾರಾಗಲು ಸಿದ್ದರಾಮಯ್ಯ ನಾನಾ ತಂತ್ರ ಹೆಣೆಯುತ್ತಿದ್ದಾರೆ.. ಅನುಕಂಪ ಪಡೆಯಲು ಸೈಟ್‌ ವಾಪಸ್‌ ಕೊಡುವ ನಿರ್ಧಾರ ಕೈಗೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ..
ಸಿಎಂ ಸಿದ್ದರಾಮಯ್ಯ ಅವರು ಭಂಡತನ ಬಿಡಬೇಕು.. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಚಾರಣೆ ಎದುರಿಸಬೇಕು.. ರಾಜೀನಾಮೆ ನೀಡೋದಕ್ಕೂ ಮೊದಲು ರಾಜ್ಯಪಾಲರ ಕ್ಷಮೆ ಕೇಳಬೇಕು ಎಂದೂ ವಿಜಯೇಂದ್ರ ಹೇಳಿದ್ದಾರೆ.. ಇನ್ನು ಇದೇ ವೇಳೆ ಮಾತನಾಡಿರುವ ವಿಪಕ್ಷ ನಾಯಕ ಆರ್‌.ಅಶೋಕ್‌, ಕದ್ದ ಮಾಲನ್ನು ವಾಪಸ್‌ ಕೊಟ್ಟ ತಕ್ಷಣ ಕಳ್ಳತನ ಮಾಫಿಯಾಗುತ್ತದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.. ಮೊದಲು ನಮ್ಮ ತಪ್ಪೇ ಇಲ್ಲ ಎಂದು ಹೇಳುತ್ತಿದ್ದರು.. ಈಗ ಸೈಟ್‌ ವಾಪಸ್‌ ನೀಡಿ ತಮ್ಮ ತಪ್ಪು ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿದ್ದಾರೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಗೆಲುವು ಎಂದು ಆರ್‌.ಅಶೋಕ್‌ ಹೇಳಿದ್ದಾರೆ..

 

Share Post