Politics

ನಾಳೆಯೇ ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ; ರಂಗೇರಲಿದೆ ಅಖಾಡ!

ನವದೆಹಲಿ; ಲೋಕಸಭಾ ಚುನಾವಣೆ ಘೋಷಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ನಾಳೆ ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟ ಮಾಡೋದಾಗಿ ಕೇಂದ್ರ ಚುನಾವಣಾ ಆಯೋಗ ಹೇಳಿಗೆ ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯುಕ್ತರು ಸುದ್ದಿಗೋಷ್ಠಿ ಕರೆದಿದ್ದು, ಅದರಲ್ಲಿ ಲೋಕಸಭಾ ಚುನಾವಣೆಯ ವೇಳಾಪಟ್ಟಿ ಘೋಷಣೆ ಮಾಡಲಾಗುತ್ತದೆ. 

ಇದನ್ನೂ ಓದಿ; ಬಿಡದಿ ತೋಟದ ಮನೆಯಲ್ಲಿ 25 ತಲೆ ಬರುಡೆ ಪತ್ತೆ; ಎಲ್ಲಿಂದ ಬಂದವು ಇವು..?

ನಾಳೆ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ;

ದೆಹಲಿಯ ವಿಜ್ಞಾನ್ ಭವನದಲ್ಲಿರುವ ಚುನಾವಣಾ ಆಯೋಗದ  ಕಚೇರಿಯಲ್ಲಿ ನಾಳೆ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದೆ.  ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ನೇತೃತ್ವದ ಚುನಾವಣಾ ಆಯೋಗ, ಲೋಕಸಭಾ ಚುನಾವಣೆಯ ದಿನಾಂಕ ಸೇರಿ ಇತರೆ ಮಾಹಿತಿಗಳನ್ನು ನೀಡಲಿದೆ.

ಚುನಾವಣೆ ಎಷ್ಟು ಹಂತಗಳಲ್ಲಿ ನಡೆಯಲಿದೆ..? ನಾಮಪತ್ರ ಸಲ್ಲಿಕೆ, ವಾಪಸ್‌, ಮತದಾನದ ದಿನಾಂಕಗಳು, ಮತ ಎಣಿಕೆ ದಿನಾಂಕ ಹೀಗೆ ಎಲ್ಲಾ ಮಾಹಿತಿ ಸಿಗಲಿದೆ. ಭದ್ರತಾ ವಿಚಾರದ ಬಗ್ಗೆಯೂ ಮಾಹಿತಿ ಸಿಗಲಿದೆ.

ಇಂದು ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾಗಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಬೆನ್ನಲ್ಲೇ ಅವರು ಮುಖ್ಯಚುನಾವಣಾ ಆಯುಕ್ತ ರಾಜೀವ್ ಕುಮಾರ್ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ದಿನಾಂಕ ಘೋಷಣೆಗೆ ಸಮಯ ನಿಗಧಿ ಮಾಡಿದ್ದಾರೆ.

ಇದನ್ನೂ ಓದಿ; BSY ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ!

ಏಳು ಹಂತಗಳಲ್ಲಿ ಮತದಾನ ನಡೆಯುವ ಸಾಧ್ಯತೆ;

ಕಳೆದ ಚುನಾವಣೆಯಲ್ಲಿ 7 ಹಂತಗಳಲ್ಲಿ ಮತದಾನ ನಡೆಸಲಾಗಿತ್ತು. ಈ ಬಾರಿಯೂ ಕೂಡಾ ಅದೇ ರೀತಿ ಏಳು ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಸೂಕ್ಷ್ಮ ಪ್ರದೇಶಗಳಿರುವ ರಾಜ್ಯಗಳಲ್ಲಿ ಎರಡು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ; ಬಹುತೇಕ ಇವರಿಗೇ ಕಾಂಗ್ರೆಸ್‌ ಟಿಕೆಟ್‌ ಫೈನಲ್‌; 21 ಕ್ಷೇತ್ರಗಳಲ್ಲಿ ಯಾರ್ಯಾರಿಗೆ ಟಿಕೆಟ್‌..?

ನಾಳೆಯಿಂದಲೇ  ಚುನಾವಣಾ ನೀತಿ ಸಂಹಿತೆ ಜಾರಿ;

ನಾಳೆ ದಿನಾಂಕ ಘೋಷಣೆ ಮಾಡಲಿರುವುದರಿಂದ ನಾಳೆಯಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.. ನಾಳೆಯಿಂದ ಎಲ್ಲೆಡೆ ಭದ್ರತೆಗಳು ಹೆಚ್ಚಾಗಲಿವೆ.. ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳು ಕೂಡಾ ಶುರುವಾಗಲಿವೆ.. ಇನ್ನು ನಾಳೆಯೇ ಪ್ರಧಾನಿ ನರೇಂದ್ರ ಮೋದಿ ಕಲಬುರಗಿಗೆ ಆಗಮಿಸುತ್ತಿದ್ದಾರೆ.

Share Post