Politics

ಮೇಕೆದಾಟು ಪಾದಯಾತ್ರೆ ಅಂತ್ಯ; ರಾಮನಗರದ ಸಭೆಯಲ್ಲಿ ತೀರ್ಮಾನ

ರಾಮನಗರ: ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ತೀರ್ಮಾನಿಸಿದ್ದಾರೆ. ಎಐಸಿಸಿ ನಾಯಕರು ಸೂಚನೆ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಸಭೆ ನಡೆಸಿದ ಕಾಂಗ್ರೆಸ್‌ ನಾಯಕರು, ಐದನೇ ದಿನಕ್ಕೇ ಪಾದಯಾತ್ರೆ ನಿಲ್ಲಿಸಲು ತೀರ್ಮಾನ ಕೈಗೊಂಡಿದೆ.

ಕೊರೊನಾ ಸಂದರ್ಭದಲ್ಲಿ ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಹೈಕೋರ್ಟ್‌ ತೀವ್ರ ಅಸಾಮಾಧಾನ ವ್ಯಕ್ತಪಡಿಸಿತ್ತು. ಈ ಬೆನ್ನಲ್ಲೆ ಸರ್ಕಾರ ಕೂಡಾ ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು. ಇದರ ನಡುವೆ ಪಕ್ಷಕ್ಕೆ ಮುಜುಗರ ಬೇಡ. ಪಾದಯಾತ್ರೆ ನಿಲ್ಲಿಸಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸೂಚಿಸಿತ್ತು.

ಈ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಸಭೆ ನಡೆಸಿದ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಮುಂತಾದ ನಾಯಕರು, ಸದ್ಯಕ್ಕೆ ಪಾದಯಾತ್ರೆ ನಿಲ್ಲಿಸಲು ತೀರ್ಮಾನಿಸಿದ್ದಾರೆ. ಕೊವಿಡ್‌ ಕಡಿಮೆಯಾದ ಮೇಲೆ ರಾಮನಗರದಿಂದಲೇ ಪಾದಯಾತ್ರೆ ಮುಂದುವರೆಸಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

Share Post