Politics

ರಾಜ್ಯದಲ್ಲಿ ಮೋದಿ ಮೇನಿಯಾ..!; ನಾಲ್ಕು ಕಡೆ ಬೃಹತ್‌ ಸಮಾವೇಶ

ಬೆಂಗಳೂರು; ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಈಗಾಗಲೇ ಮತದಾನ ಮುಗಿದಿದೆ.. ಉಳಿದ 14 ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ.. ಈಗ ಈ ಕ್ಷೇತ್ರಗಳ ಕಡೆ ಎಲ್ಲರ ಗಮನ ಸೆಳೆಯುತ್ತಿದೆ.. ರಾಜಕೀಯ ನಾಯಕರೆಲ್ಲಾ ಉತ್ತರ ಕರ್ನಾಟಕದಲ್ಲಿ ಬೀಡುಬಿಟ್ಟಿದ್ದಾರೆ.. ಸಿಎಂ ಸಿದ್ದರಾಮಯ್ಯ ಕೂಡಾ ಬಿಡುವಿಲ್ಲದೆ ಪ್ರಚಾರ ನಡೆಸುತ್ತಿದ್ದಾರೆ.. ಇತ್ತ ಪ್ರಧಾನಿ ನರೇಂದ್ರ ಮೋದಿ ಕೂಡಾ ರಾಜ್ಯಕ್ಕೆ ಆಗಮಿಸಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಭಾಗಿಯಾಗಿದ್ದಾರೆ.. ಸುತ್ತಮುತ್ತಲಿನ ಕ್ಷೇತ್ರಗಳ ಕಾರ್ಯಕರ್ತರನ್ನು ಒಟ್ಟಿಗೆ ಸೇರಿಸಿ ಇಲ್ಲಿ ಸಮಾವೇಶ ನಡೆಸಲಾಗುತ್ತಿದೆ.. ಈ ಸಮಾವೇಶ ಮುಗಿದ ಮೇಲೆ ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ತೆರಳಲಿದ್ದಾರೆ.. ಅನಂತರ ಮಧ್ಯಾಹ್ನ ದಾವಣಗೆರೆಯಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.. ಸಂಜೆ ಐದು ಗಂಟೆಗೆ ಮೋದಿಯವರು ಬಳ್ಳಾರಿಯಲ್ಲಿ ನಡೆಯುವ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ..

ಎಲ್ಲಿ ಎಷ್ಟು ಗಂಟೆಗೆ ಕಾರ್ಯಕ್ರಮ?

=========================
ಬೆಳಗ್ಗೆ 10 ಗಂಟೆ – ಬೆಳಗಾವಿ
ಮಧ್ಯಾಹ್ನ 1 ಗಂಟೆ – ಶಿರಸಿ, ಉತ್ತರ ಕನ್ನಡ
ಮಧ್ಯಾಹ್ನ 3 ಗಂಟೆ – ದಾವಣಗೆರೆ
ಸಂಜೆ 5 ಗಂಟೆ – ಬಳ್ಳಾರಿ

Share Post