Politics

ರಮೇಶ್‌ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಿ; ಸಚಿವ ಎಂಟಿಬಿ ನಾಗರಾಜ್‌

ಹೊಸಕೋಟೆ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಚಾರ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಹೈಕಮಾಂಡ್‌ಗೆ ಬಿಟ್ಟಿದ್ದು. ಸಚಿವಗಿರಿಗಾಗಿ ಹಲವರು ಒತ್ತಡ ತರುತ್ತಿದ್ದಾರೆ. ರಮೇಶ್‌ ಜಾರಕಿಹೊಳಿಯವರಿಗೂ ಸಚಿವ ಸ್ಥಾನ ನೀಡಬೇಕಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಗಮನ ಹರಿಸಬೇಕು ಎಂದು ಸಚಿವ ಎಂಟಿಬಿ ನಾಗರಾಜ್‌ ಹೇಳಿದ್ದಾರೆ.

ರಮೇಶ್‌ ಜಾರಕಿಹೊಳಿಯವರು ನಮ್ಮ ಜೊತೆ ಬಿಜೆಪಿ ಪಕ್ಷಕ್ಕೆ ಬಂದವರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಬೇಕಾದರೆ ಅವರ ಪಾತ್ರ ದೊಡ್ಡದಿದೆ. ಆದರೆ ಕಾರಣಾಂತರಗಳಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಈಗ ಅವರಿಗೆ ಸಚಿವ ನೀಡಬೇಕಾಗಿದೆ. ಅವರೂ ಕೂಡಾ ಸಚಿವಾಕಾಂಕ್ಷಿಯಾಗಿದ್ದಾರೆ. ಸಂಪುಟ ವಿಸ್ತರಣೆಯಾದರೆ, ರಮೇಶ್‌ ಜಾರಕಿಹೊಳಿಯವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್‌ ಹೇಳಿದ್ದಾರೆ.

Share Post