BengaluruPolitics

ಮುಡಾ ಹಗರಣ; ಸಿಎಂ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು!

ಬೆಂಗಳೂರು; ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ದೂರು ನೀಡಿದ್ದರು.. ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ನೀಡಲಾಗಿದೆ.. ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ದೂರು ನೀಡಿದ್ದಾರೆ..

ಇದನ್ನೂ ಓದಿ; 3 ವರ್ಷದಲ್ಲಿ 5 ಮದುವೆಯಾದ ಹುಬ್ಬಳ್ಳಿಯ ಹೆಣ್ಣು!

ಸಿದ್ದರಾಮಯ್ಯ ಅವರು ಪತ್ನಿ ಪಾರ್ವತಿ ಅವರಿಂದ ಮುಡಾದ ಪ್ರಥಮ ದರ್ಜೆ ಸಹಾಯಕ ಕೆ.ಸಿ.ಉಮೇಶ್ ಎಂಬವವರು ಪರಿತ್ಯಾಜನ ಪತ್ರ ನೋಂದಣಿ ಮಾಡಿಸಿಕೊಂಡಿದ್ದಾರೆ. ಕೆಸರೆ ಗ್ರಾಮದ ಸರ್ವೆ ನಂ. 464ರ 3.16 ಎಕರೆ ಜಮೀನು ಸಂಬಂಧ ಪರಿತ್ಯಾಜನ ಪತ್ರ ನೋಂದಣಿಯಾಗಿದೆ.. ಇದು ಅಕ್ರಮವಾಗಿದ್ದು, ಕೂಡಲೇ ಉಮೇಶ್‌ ಹಾಗೂ ಇತರೆಯವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.. ಸ್ನೇಹಮಹಿ ಕೃಷ್ಣ ನೀಡಿರೋ ದೂರನ್ನು ರಾಜ್ಯಪಾಲರ ಕಚೇರಿ ಸ್ವೀಕರಿಸಿದೆ.

ಇದನ್ನೂ ಓದಿ; ಕಾರಿನಲ್ಲಿ ಇಬ್ಬರು ಯುವತಿಯರ ಜೊತೆ ಯುವಕನ ರೊಮ್ಯಾನ್ಸ್‌!

 

Share Post