Politics

Pakistan slogan; ನನ್ನ ಹೇಳಿಕೆ ತಿರುಚಲಾಗಿದೆ; ಬಿ.ಕೆ.ಹರಿಪ್ರಸಾದ್‌ ಸ್ಪಷ್ಟನೆ

ಬೆಂಗಳೂರು; ವಿಧಾನ ಮಂಡಲ ಕಲಾಪದಲ್ಲಿ ಇವತ್ತೂ ಕೂಡಾ ಪಾಕಿಸ್ತಾನದ ಪರ ಘೋಷಣೆ ವಿಚಾರ ಕೋಲಾಹಲಕ್ಕೆ ಕಾರಣವಾಗಿದೆ, ಇದೇ ವೇಳೆ ಪರಿಷತ್‌ನಲ್ಲಿ ಮಾತನಾಡಿರುವ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌, ವಿವಾದಿತ ಹೇಳಿಕೆ ಕೊಟ್ಟಿದ್ದಾರೆ ಎಂದು ಸುದ್ದಿಯಾಗಿತ್ತು. ಪರಿಷತ್‌ನಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಬಗ್ಗೆ ಚರ್ಚೆ ನಡೆಯಿತು. ಈ ವೇಳೆ ಮಾತನಾಡಿದ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌, ಪಾಕಿಸ್ತಾನ ಬಿಜೆಪಿಗೆ ಮಾತ್ರ ಶತ್ರು ರಾಷ್ಟ್ರ, ನಮಗಲ್ಲ. ಕಾಂಗ್ರೆಸ್‌ಗೆ ಪಾಕಿಸ್ತಾನ ನೆರೆ ರಾಷ್ಟ್ರ ಅಷ್ಟೇ ಎಂದಿದ್ದಾರೆ ಎಂದು ಸುದ್ದಿಯಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಹರಿಪ್ರಸಾದ್ ನನ್ನ ಹೇಳಿಕೆ ತಿರುಚಲಾಗಿದೆ. ನಾನು ಮಾಧ್ಯಮಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ;ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಲ್ಯಾಂಡ್‌ ಜಿಹಾದ್‌ ಆರೋಪ ಮಾಡಿದ ಆರ್‌.ಅಶೋಕ್‌!

ಏನಿದು ಪ್ರಕರಣ ಗೊತ್ತೇ..?;

ಏನಿದು ಪ್ರಕರಣ ಗೊತ್ತೇ..?; ಮಂಗಳವಾರ ರಾಜ್ಯದಲ್ಲಿ ರಾಜ್ಯಸಭಾ ಚುನಾವಣೆ ನಡೆದಿತ್ತು. ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯಶಾಲಿಯಾದರು. ಕಾಂಗ್ರೆಸ್‌ ಜಯಶಾಲಿ ಅಭ್ಯರ್ಥಿಗಳಲ್ಲಿ ಒಬ್ಬರಾದ ನಾಸೀರ್‌ ಹುಸೇನ್‌ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಅವರನ್ನು ಭೇಟಿಯಾಗಿ ಘೋಷಣೆ ಕೂಗುತ್ತಿದ್ದರು. ಈ ವೇಳೆ ಅವರ ಪರವಾದ ಬೆಂಬಲಿಗನೊಬ್ಬ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾನೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ವಿಡಿಯೋ ತುಣುಕೊಂದು ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಸದಸ್ಯರು, ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ವಜಾ ಮಾಡಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ; 44 ಕಾಂಗ್ರೆಸ್‌ ಕಾರ್ಯಕರ್ತರಿಗೆ ನಿಗಮ-ಮಂಡಳಿ ಸ್ಥಾನ; ಸಾಧು ಕೋಕಿಲಗೂ ಸಿಕ್ತು ಹುದ್ದೆ

ಬಿಜೆಪಿಯಿಂದ ರಾಜಭವನದವರೆಗೆ ಮೆರವಣಿಗೆ;

ಬಿಜೆಪಿಯಿಂದ ರಾಜಭವನದವರೆಗೆ ಮೆರವಣಿಗೆ; ಪಾಕಿಸ್ತಾನದ ಪರ ಘೋಷಣೆ ಕೂಗಿರುವ ವಿಚಾರ ದೊಡ್ಡದಾಗುತ್ತಿದ್ದಂತೆ ಬಿಜೆಪಿ ರಾಜ್ಯಾದ್ಯಂತ ನಿನ್ನೆ ಹೋರಾಟ ನಡೆಸಿತ್ತು.. ಸದನದಲ್ಲಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದಲ್ಲದೆ, ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕೂಡಾ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಇನ್ನು ಕೂಡಾ ಬಿಜೆಪಿ ಪ್ರತಿಭಟನೆ ಮುಂದುವರೆಸಿದೆ.. ನಿನ್ನೆ ರಾಷ್ಟ್ರ ಧ್ವಜಗಳೊಂದಿಗೆ ಮೆರವಣಿಗೆ ಮಾಡುತ್ತಾ ವಿಧಾನಮಂಡಲ ಅಧಿವೇಶನಕ್ಕೆ ಹೋಗಿದ್ದ ಬಿಜೆಪಿ ಶಾಸಕರು, ಇಂದು ರಾಜಭವನಕ್ಕೆ ಪಾದಯಾತ್ರೆ ನಡೆಸಿದರು. ವಿಪಕ್ಷ ನಾಯಕ ಆರ್‌.ಅಶೋಕ್‌ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ನಾಯಕರು, ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಇದನ್ನೂ ಓದಿ; Vidyabalan; ನಟಿ ವಿದ್ಯಾಬಾಲನ್‌ಗೆ ಕಿರಿಕಿರಿ ಮಾಡಿದ ವ್ಯಕ್ತಿ; ವಿಡಿಯೋ ಇದೆ!

Share Post