Politics

ಪ್ರಜ್ವಲ್ ಪ್ರಕರಣ; ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆಗೆ ಮುಂದಾಗಿದ್ದರಾ ದೇವೇಗೌಡರು..?

ಬೆಂಗಳೂರು; ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದಿಂದ ಮಾಜಿ ಪ್ರಧಾನಿ ದೇವೇಗೌಡರು ತೀವ್ರ ಅಸಮಾಧಾನಗೊಂಡಿದ್ದಾರೆ. ಅವರು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಉದ್ದೇಶಪೂರ್ವಕವಾಗಿ ನಮ್ಮ ಕುಟುಂಬವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ..

   ಉದ್ದೇಶ ಪೂರ್ವಕವಾಗಿ ನಮ್ಮ ಕುಟುಂಬವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ನಮ್ಮನ್ನು ರಾಜಕೀಯವಾಗಿ ಮುಗಿಸಲು ಈ  ಷಡ್ಯಂತ್ರ ಮಾಡಲಾಗಿದೆ. ಈ ಪ್ರಕರಣದಿಂದ ಮನನೊಂದು ದೇವೇಗೌಡ ಅವರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ್ಟಿದ್ದರು ಎಂದು ಕುಮಾರಸ್ವಾಮಿ‌ ಹೇಳಿದ್ದಾರೆ.. ಯಾವುದೇ ಕಾರಣಕ್ಕೂ ಆ ಕೆಲಸ ಮಾಡಬೇಡಿ ಎಂದು ನಾನು ಹೇಳಿದೆ. ಇದರಿಂದ ದೇವೇಗೌಡರು ಸುಮ್ಮನಾದರು ಎಂದು ಕುಮಾರಸ್ವಾಮಿ ಇದೇ ವೇಳೆ ಹೇಳಿದ್ದಾರೆ..

   ನಮ್ಮ ಕುಟುಂಬದ ಎಲ್ಲರ ಫೋನ್ ಟ್ಯಾಪ್ ಆಗುತ್ತಿದೆ ಎಂದು ಆರೋಪ ಮಾಡಿರುವ ಕುಮಾರಸ್ವಾಮಿ, ನಾನು ಅಕ್ರಮದ ಬಗ್ಗೆ ಮಾತಾಡ್ತೇನೆಂದು ನನ್ನ ಮೇಲೆ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ..

 

Share Post