NationalPolitics

ರಾಷ್ಟ್ರಪತಿ ಚುನಾವಣೆ ಹಿನ್ನೆಲೆ; ಇಂದು ಸಮಾನ ಮನಸ್ಕ ಪಕ್ಷಗಳ ಸಭೆ

ನವದೆಹಲಿ; ರಾಷ್ಟ್ರಪತಿ ಚುನಾವಣೆ ಘೋಷಣೆಯಾಗಿರುವುದರಿಂದ ಬಿಜೆಪಿಗೆ ಪರ್ಯಾಯವಾಗಿ ಸಮಾನ ಮನಸ್ಕ ಪಕ್ಷಗಳು ಅಭ್ಯರ್ಥಿಯನ್ನು ಹಾಕಲು ತಯಾರಿ ನಡೆಸುತ್ತಿವೆ. ಅದಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಜೆಡಿಎಸ್‌ ಪಕ್ಷದ ಪರವಾಗಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಭಾಗವಹಿಸುತ್ತಿದ್ದಾರೆ.

ಬಿಜೆಪಿಗೆ ಪರ್ಯಾಯವಾಗಿ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಕ್ಕೆ ಎಲ್ಲಾ ಸಮಾನ ಮನಸ್ಕ ಪ್ರಾದೇಶಿಕ ಪಕ್ಷಗಳು ಕಸರತ್ತು ಮಾಡುತ್ತಿವೆ.  ಈ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ಅವರು ಪ್ರಯತ್ನಗಳನ್ನು ಆರಂಭಿಸಿದ್ದು, ಸುಮಾರು ಇಪ್ಪತ್ತೆರಡಕ್ಕೂ ಹೆಚ್ಚು ಪಕ್ಷಗಳ ನಾಯಕರನ್ನು ಸಭೆಗೆ ಆಹ್ವಾನಿಸಿದ್ದಾರೆ.

 

Share Post