BengaluruPolitics

ರಾಜ್ಯಸಭಾ ಚುನಾವಣೆ; ಸೋನಿಯಾ ಗಾಂಧಿ ಕರೆ ಮಾಡಿದ್ದರು – ರೇವಣ್ಣ

ಬೆಂಗಳೂರು; ಕೋಮುವಾದಿ ಬಿಜೆಪಿಯನ್ನುಅಧಿಕಾರದಿಂದ ದೂರ ಇಡಬೇಕು ಎಂಬುದು ನಮ್ಮ ಉದ್ದೇಶ. ಹೀಗಾಗಿ ಕಾಂಗ್ರೆಸ್‌ ವರಿಷ್ಠರನ್ನು ನಮ್ಮ ಅಭ್ಯರ್ಥಿಗೆ ಬೆಂಬಲಿಸುವಂತೆ ಮನವಿ ಮಾಡಿದ್ದೇವೆ ಎಂದು ಜೆಡಿಎಸ್‌ ನಾಯಕ ಹೆಚ್‌.ಡಿ.ರೇವಣ್ಣ ಹೇಳಿದ್ದಾರೆ.

 

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬೆಳಗ್ಗೆ ಸೋನಿಯಾಗಾಂಧಿಯವರು ದೇವೇಗೌಡರಿಗೆ ಕರೆ ಮಾಡಿದ್ದರು. ಈ ವೇಳೆ ನಮಗೆ ಬೆಂಬಲ ನೀಡುವಂತೆ ದೇವೇಗೌಡರು ಸೋನಿಯಾಗೆ ಮನವಿ ಮಾಡಿದರು. ಇದಾದ ಮೇಲೆ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಕರೆ ಮಾಡಿದ್ದರು. ಆ ಕಾಂಗ್ರೆಸ್‌ನ ಹಿರಿಯ ನಾಯಕ ಎರಡು ಮೂರು ಬಾರಿ ಕರೆ ಮಾಡಿದ್ದರು ಎಂದು ರೇವಣ್ಣ ಹೇಳಿದ್ದಾರೆ.

 

 

 

 

 

Share Post