Politics

ಮಹಿಳೆಯರ ಬಗ್ಗೆ ರಮೇಶ್‌ಕುಮಾರ್‌ ಹೇಳಿಕೆ: ಕಾಂಗ್ರೆಸ್‌ ಉಸ್ತುವಾರಿ ಅಸಮಾಧಾನ

ನವದೆಹಲಿ: ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಗಾಲದ ಅಧಿವೇಶನದಲ್ಲಿ ಹಿರಿಯ ಕಾಂಗ್ರೆಸ್‌ ಶಾಸಕ ರಮೇಶ್‌ ಕುಮಾರ್‌ ಅವರು ಮಹಿಳೆಯರ ಬಗ್ಗೆ ನೀಡುವ ಹೇಳಿಕೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಂದೀಪ್‌ ಸುರ್ಜೇವಾಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸದನದಲ್ಲಿ ಕರ್ನಾಟಕ ವಿಧಾನಸಭಾ ಸ್ಪೀಕರ್ ಮತ್ತು ಸೀನಿಯರ್ ಕಾಂಗ್ರೆಸ್ ಶಾಸಕರ ನಡುವೆ ಅತ್ಯಂತ ಆಕ್ಷೇಪಾರ್ಹ ಮತ್ತು ಸಂವೇದನಾರಹಿತ ವಿನೋದದ ವಿನಿಮಯವನ್ನು ಕಾಂಗ್ರೆಸ್ ಪಕ್ಷ ಒಪ್ಪುವುದಿಲ್ಲ.

ಕಸ್ಟೋಡಿಯನ್ ಆಗಿ ಸ್ಪೀಕರ್ ಮತ್ತು ಸೀನಿಯರ್ ಶಾಸಕರು ರೋಲ್ ಮಾಡೆಲ್ ಗಳಾಗುತ್ತಾರೆ ಎಂದು ನಾವು ನಿರೀಕ್ಷಿಸಿದ್ದೇವೆ.  ಹಿರಿಯ ಶಾಸಕರು ಸ್ವೀಕಾರಾರ್ಹವಲ್ಲದ ನಡವಳಿಕೆಯಿಂದ ದೂರವಿರಬೇಕು ಎಂದು ಸುರ್ಜೇವಾಲಾ ಹೇಳಿದ್ದಾರೆ.

Share Post