NationalPolitics

ನಾಳೆ ಮಧ್ಯಾಹ್ನ ರೇವಂತ್‌ ರೆಡ್ಡಿ ಪ್ರಮಾಣವಚನ; ಎಲ್‌ಬಿ ಸ್ಟೇಡಿಯಂನಲ್ಲಿ ಸಿದ್ಧತೆ

ನವದೆಹಲಿ; ತೆಲಂಗಾಣದಲ್ಲಿ ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್‌ ಸರ್ಕಾರ ರಚನೆ ಮಾಡುತ್ತಿದೆ. ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್‌ ರೆಡ್ಡಿ ನಾಳೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ 1 ಗಂಟೆ 4 ನಿಮಿಷಕ್ಕೆ ರೇವಂತ್‌ ರೆಡ್ಡಿ ತೆಲಂಗಾಣ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಇದಕ್ಕಾಗಿ ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ಸಿದ್ಧತೆಗಳು ನಡೆಯುತ್ತಿವೆ.

ಇನ್ನು ರೇವಂತ್‌ ರೆಡ್ಡಿಯವರು ಇಂದು ದೆಹಲಿಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದಾರೆ. ಸೋನಿಯಾಗಾಂಧಿ, ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯ ಅವರನ್ನು ರೇವಂತ್‌ ರೆಡ್ಡಿ ಭೇಟಿಯಾಗಿದ್ದಾರೆ. ಈ ವೇಳೆ ಅವರನ್ನು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆ. ನಾಳಿನ ಪ್ರಮಾಣವಚನ ಸ್ವೀಕಾರ ಸಮಾರಂಭದ ಬಳಿಕ ಕೃತಜ್ಞತಾ ಸಭೆ ಕೂಡಾ ನಡೆಯಲಿದೆ.

 

Share Post