NationalPolitics

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಅದ್ದೂರಿ ಸ್ವಾಗತ

ಬೆಂಗಳೂರು; ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಬ್ಬರೂ ನಾಯಕರಿಗೆ ಸಾವಿರಾರು ಕಾರ್ಯಕರ್ತರು ಸ್ವಾಗತ ಕೋರಿದರು. ಹೂವಿನ ಮಳೆ ಸುರಿಸಿದರು.

ಇಬ್ಬರೂ ನಾಯಕರು ಪ್ರತ್ಯೇಕ ಕಾರಿನಲ್ಲಿ ಕೆಪಿಸಿಸಿ ಕಚೇರಿ ಬಳಿಗೆ ಹೊರಟರು. ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

Share Post