BengaluruPolitics

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ; ಸಿದ್ದರಾಮಯ್ಯ

ಬೆಂಗಳೂರು; ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ.. ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ..

  ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನಾಚಾರಣೆ ಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  ಮುಖ್ಯಮಂತ್ರಿ ಸ್ಥಾನದ ಬಗ್ಗೆ ಯಾರು ಮಾತನಾಡಬಾರದು. ಜೊತೆಗೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಯಾರೂ ಕೂಡಾ ಹೇಳಿಕೆ ಕೊಟ್ಟಿಲ್ಲ.. ಆ ಸ್ಥಾನ ಖಾಲಿಯಿಲ್ಲದಿರುವಾಗ ಈ ಬಗ್ಗೆ ಚರ್ಚೆ ಅನಗತ್ಯ ಎಂದು ಸಿಎಂ ಹೇಳಿದರು.

ಬಿಜೆಪಿಯವರು ನನ್ನ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಾನು ಆ ಕೆಲಸ ಮಾಡೋದಿಲ್ಲ. ಆದ್ರೆ ತಪ್ಪು ಮಾಡಿದವರ ವಿರುದ್ಧ ಕ್ರಮ ಆಗುತ್ತದೆ ಎಂದು ಹೇಳಿದ್ದಾರೆ.

 

Share Post