BengaluruPolitics

ಎಸ್‌ಐಟಿ ಅಂದ್ರೆ ಸಿದ್ದರಾಮಯ್ಯ, ಶಿವಕುಮಾರ್‌ ಇನ್ವೆಸ್ಟಿಗೇಷನ್‌ ಟೀಂ; ಆರೋಪ

ಬೆಂಗಳೂರು; ಎಸ್‌ಐಟಿ ಅನ್ನೋದು ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.. ರಾಜ್ಯ ಸರ್ಕಾರಕ್ಕೆ ನಿಜವಾಗಿಯೂ ಪೆನ್‌ಡ್ರೈವ್‌ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವ ಉದ್ದೇಶವಿಲ್ಲ.. ಇದ್ದಿದ್ದರೆ, ವಿಡಿಯೋ ಹರಿಬಿಟ್ಟವರನ್ನೂ ಬಂಧಿಸಬೇಕಿತ್ತು.. ಈ ಬಗ್ಗೆ ಐದು ಮಂದಿಯ ವಿರುದ್ಧ ದೂರು ದಾಖಲಾಗಿತ್ತು.. ಆದ್ರೆ ಇದುವರೆಗೂ ಆ ಬಗ್ಗೆ ಯಾವುದೇ ಕ್ರಮ ಆಗಿಲ್ಲ ಎಂದು ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ..

ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.. ಅಲ್ಲದೆ ಹಲವು ಪ್ರಶ್ನೆಗಳನ್ನು ಕೂಡಾ ಕೇಳಿದ್ದಾರೆ.. ಪ್ರಜ್ವಲ್ ಪರ ಪ್ರಚಾರ ಮಾಡಿದ್ದಾಕೆ ದೂರು ಕೊಟ್ಟಿದ್ದು ಹೇಗೆ..?, ಆಕೆಯಿಂದ ಪ್ರಜ್ವಲ್ ವಿರುದ್ಧ ದೂರು ಕೊಡಿಸಿದ್ಯಾರು?, ಕಿಡ್ನ್ಯಾಪ್‌ ಆಗಿದ್ದ ಸಂತ್ರಸ್ತೆಯನ್ನ ಎಲ್ಲಿಂದ ಕರ್ಕೊಂಡ್‌ ಬಂದ್ರಿ? ಹೀಗೆ ಹತ್ತು ಹಲವು ಪ್ರಶ್ನೆಗಳನ್ನು ಕುಮಾರಸ್ವಾಮಿ ಹೇಳಿದ್ದಾರೆ.

Share Post