BengaluruPolitics

ಕುಮಾರ್‌ ಬಂಗಾರಪ್ಪ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಶಿವರಾಜ್‌ಕುಮಾರ್‌ ಅಭಿಮಾನಿಗಳು!

ಬೆಂಗಳೂರು; ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಶಿವರಾಜ್‌ಕುಮಾರ್‌ ಪತ್ನಿ ಗೀತಾಶಿವರಾಜ್‌ ಕುಮಾರ್‌ ಹೀನಾಯವಾಗಿ ಸೋತಿದ್ದರು.. ಈ ಹಿನ್ನೆಲೆಯಲ್ಲಿ ಫೇಸ್‌ಬುಕ್‌ ಪೋಸ್ಟ್‌ ಹಾಕಿದ್ದ ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಅವರು, ಗೀತಾಶಿವರಾಜ್‌ಕುಮಾರ್‌, ಶಿವರಾಜ್‌ಕುಮಾರ್‌ ಹಾಗೂ ಮಧುಬಂಗಾರಪ್ಪ ಅವರನ್ನು ಅವಹೇಳನ ಮಾಡಿದ್ದರು.. ಇದರಿಂದ ಆಕ್ರೋಶಗೊಂಡಿರುವ ಶಿವರಾಜ್‌ಕುಮಾರ್‌ ಅಭಿಮಾನಿಗಳು ಕುಮಾರ್‌ ಬಂಗಾರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ..

ಫೇಸ್‌ಬುಕ್‌ ಪೋಸ್ಟ್‌ ಹಾಕಿದ್ದ ಕುಮಾರ್‌ ಬಂಗಾರಪ್ಪ ಅವರು “ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು” ಎಂದು ಹೇಳಿದ್ದರು.. ಇದರಿಂದ ಆಕ್ರೋಶಗೊಂಡ ಶಿವರಾಜ್‌ಕುಮಾರ್‌ ಅವರ ಅಭಿಮಾನಿಗಳು, ಬೆಂಗಳೂರಿನ ಸದಾಶಿವನಗರದಲ್ಲಿರುವ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.. ಕುಮಾರ್ ಬಂಗಾರಪ್ಪ ಅವರ ನಿವಾಸದ ಗೇಟ್ ಒಳಗೆ ನುಗ್ಗಿ ಧಿಕ್ಕಾರ ಕೂಗಿದರು.

ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಹೊರಗೆ ಹೋಗುವಂತೆ ಸೂಚಿಸಿದರು.. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು.. ಕುಮಾರ್‌ ಬಂಗಾರಪ್ಪ ಅವರನ್ನು ಹೊರಗೆ ಕರೆಸಿ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದರು.. ಕೊನೆಗೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬೇರೆಡೆಗೆ ಕರೆದುಕೊಂಡು ಹೋದರು..

 

Share Post