NationalPolitics

ಜನಕಲ್ಯಾಣವೇ ನಮ್ಮ ಆದ್ಯತೆ; ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ಬೆಂಗಳೂರು; ಕರ್ನಾಟಕದ ಪರಿಸ್ಥಿತಿಯನ್ನು ಸುಭ್ರದಗೊಳಿಸುವ ಹಾಗೂ ರಾಜ್ಯದ ಜನ ಕಲ್ಯಾಣ ನಮ್ಮ ಮೊದಲ ಆದ್ಯತೆಯಾಗಿದೆ. ಇದಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಅವರು ಟ್ವೀಟ್‌ ಮಾಡಿದ್ದಾರೆ.

ನಾವು ಜನರ ಕಲ್ಯಾಣಕ್ಕೆ ಆದ್ಯತೆ ಕೊಡುತ್ತೇವೆ ಎಂದು ಹೇಳುವ ಮೂಲಕ ನಮಗೆ ಅಧಿಕಾರಕ್ಕಿಂತ ಜನರ ಹಿತ ಮುಖ್ಯ ಎನ್ನುವುದನ್ನು ಡಿ.ಕೆ.ಶಿವಕುಮಾರ್‌ ಟ್ವೀಟ್‌ನಲ್ಲಿ ಮನವರಿಕೆ ಮಾಡಿಕೊಟ್ಟಿದ್ದಾರೆ. ಸಿಎಂ ಹಾಗೂ ಡಿಸಿಎಂ ಬಗ್ಗೆ ಅಧಿಕೃತ ಪ್ರಕಟಣೆಯಾದ ಮೇಲೆ ಡಿಕೆಶಿ ಮೊದಲ ಟ್ವೀಟ್‌ ಇದು.

 

Share Post