Politics

ರಾಜ್ಯದಲ್ಲಿ ಇಂದು ಮೋದಿ ಹವಾ..!; ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಕ್ಯಾಂಪೇನ್‌

ಕೆಲ ದಿನಗಳ ಹಿಂದೆ ಮೈಸೂರು ಹಾಗೂ ಮಂಗಳೂರಿನಲ್ಲಿ ಪ್ರಚಾರ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.. ಬೆಂಗಳೂರಿನ ಮೂರು ಕ್ಷೇತ್ರಗಳು ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳನ್ನು ಗಮನದಲ್ಲಿಟ್ಟುಕೊಂಡು ಮೋದಿ ಇಂದು ಪ್ರಚಾರ ನಡೆಸಲಿದ್ದಾರೆ..

ಇದನ್ನೂ ಓದಿ; ಮಗುಚಿಬಿದ್ದ 50 ಪ್ರಯಾಣಿಕರಿದ್ದ ದೋಣಿ; ಇಬ್ಬರ ಸಾವು, 7 ಮಂದಿ ನಾಪತ್ತೆ!

ಇಂದು ಮಧ್ಯಾಹ್ನದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸಲಿದ್ದಾರೆ.. ಇಂದು ಮಧ್ಯಾಹ್ನ ಮಧ್ಯಾಹ್ನ 3.45 ರಿಂದ 4.25ರವರೆಗೆ ಚಿಕ್ಕಬಳ್ಳಾಪುರದಲ್ಲಿ ಮೋದಿ ಸಮಾವೇಶ ನಡೆಯಲಿದ್ದು, ಡಾ.ಕೆ.ಸುಧಾಕರ್‌ ಪರ ಪ್ರಚಾರ ನಡೆಸಲಿದ್ದಾರೆ.. ನಂತರ ಸಂಜೆ 5.30 ರಿಂದ 6.10ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ.. ಈ ಹಿನ್ನೆಲೆಯಲ್ಲಿ ಕೆಲ ಮಾರ್ಗ ಬದಲಾವಣೆ ಮಾಡಲಾಗಿದೆ. ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 7 ಗಂಟೆತನಕ ಮಾರ್ಗ ಬದಲಾವಣೆ ಮಾಡಲಾಗಿದೆ.

ಇದನ್ನೂ ಓದಿ; ಕಾರು-ಟ್ರಕ್‌ ನಡುವೆ ಭೀಕರ ಅಪಘಾತ; ಕಾರಿನಲ್ಲಿದ್ದ 10 ಮಂದಿ ದುರ್ಮರಣ

ನೋ ಎಂಟ್ರಿ..!
============
ಪ್ಯಾಲೇಸ್‌ ರಸ್ತೆ , ಜಯಮಹಲ್ ರಸ್ತೆ
MV ಜಯರಾಮ್‌, ವಸಂತನಗರ ರಸ್ತೆ
ಸಿ.ವಿ. ರಾಮನ್ ರಸ್ತೆ, ನಂದಿದುರ್ಗ ರಸ್ತೆ
ಮೇಕ್ರಿ ಸರ್ಕಲ್, ವಸಂತ ನಗರ ರಸ್ತೆ
ಬಳ್ಳಾರಿ ರಸ್ತೆ, ತರಬಾಳು ರಸ್ತೆ
ಮೌಂಟ್‌ ಕಾರ್ಮೆಲ್ ಕಾಲೇಜ್ ರಸ್ತೆ
ಇದಲ್ಲದೆ ಮೇಖ್ರಿ ಸರ್ಕಲ್‌ನಿಂದ ಯಶವಂತಪುರ ರಸ್ತೆವರೆಗೆ ಭಾರೀ ಸರಕು ಸಾಗಾಣಿಕಾ ವಾಹನಗಳ ಸಂಚಾರ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ನಗರದೊಳಗೆ ಪ್ರವೇಶಿಸುವುದನ್ನೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Share Post