CrimeNationalPolitics

ಪಶ್ಚಿಮ ಬಂಗಾಳ ಪಂಚಾಯತ್‌ ಚುನಾವಣೆಯಲ್ಲಿ ಹಿಂಸಾಚಾರ; 12 ಮಂದಿ ಬಲಿ

ಪಶ್ಚಿಮ ಬಂಗಾಳ; ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪಂಚಾಯತ್‌ ಚುನಾವಣೆ ವೇಳೆ ಹಿಂಸಾಚಾರ ನಡೆದಿದೆ. ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ದು, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ, ಪಕ್ಷಗಳ ಕಾರ್ಯಕರ್ತರು ಹಲವೆಡೆ ದಾಂದಲೆ ನಡೆಸಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.

ಕೂಚ್‌ಬೆಹಾರ್ ಜಿಲ್ಲೆಯ ಫಲಿಮಾರಿ ಗ್ರಾಮ ಪಂಚಾಯತ್‌ನಲ್ಲಿ ಬಿಜೆಪಿ ಮತಗಟ್ಟೆ ಏಜೆಂಟ್ ಮಾಧಬ್ ಬಿಸ್ವಾಸ್ ಎಂಬಾತನನ್ನು ಹತ್ಯೆ ಮಾಡಲಾಗಿದೆ. ಉತ್ತರ 24 ಪರಗಣ ಜಿಲ್ಲೆಯ ಕದಂಬಗಚಿ ಪ್ರದೇಶದಲ್ಲೂ ಗಲಾಟೆಗೆಳು ನಡೆದಿವೆ. ಹಲವು ಕಡೆ ಮತ ಪೆಟ್ಟಿಗೆಗಳನ್ನು ಜನರು, ಮಹಿಳೆಯರು ಹೊತ್ತೊಯ್ದಿದ್ದಾರೆ. ಒಂದು ಕಡೆ ಮತಪೆಟ್ಟಿಗೆಯನ್ನು ತೆಗೆದುಕೊಂಡು ಹೋಗಿ ನೀರಿಗೆ ಹಾಕಲಾಗಿದೆ. ಮತ್ತೊಂದೆಡೆ ಮತಕೇಂದ್ರಕ್ಕೇ ಬೆಂಕಿ ಹಚ್ಚಲಾಗಿದೆ.

Share Post