NationalPolitics

ಪಕ್ಷ ಹೇಳಿದ್ದನ್ನು ನಾವು ಕೇಳುತ್ತಿದ್ದೇವೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ನಾನೇ ಕಳೆದ ಮಧ್ಯ ರಾತ್ರಿ ರಾಜ್ಯಪಾಲರಿಗೆ ಅಧಿಕೃತವಾಗಿ ಪತ್ರ ಬರೆದಿದ್ದೇನೆ. ಶನಿವಾರ ಮಧ್ಯಾಹ್ನ ೧೨.೩೦ಕ್ಕೆ ಪ್ರಮಾಣವಚನಕ್ಕೆ ಅವಕಾಶ ಮಾಡಿಕೊಡಬೇಕೆಂದು ಕೇಳಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರಿಗೆ ತೆರಳುವುದಕ್ಕೂ ಮೊದಲ ಮಾತನಾಡಿದ ಡಿ.ಕೆ.ಶಿವಕುಮಾರ್‌, ರಾಜ್ಯದಲ್ಲಿ ಜನರು ಪಕ್ಷಕ್ಕೆ ದೊಡ್ಡ ಅಧಿಕಾರ ಕೊಟ್ಟಿದ್ದಾರೆ. ಹೀಗಾಗಿ ನಾವು ಅವರ ಋಣ ತೀರಿಸಬೇಕಿದೆ ಎಂದು ಹೇಳಿದರು. ನಾವು ಹೈಕಮಾಂಡ್‌ ತೀರ್ಮಾನಕ್ಕೆ ಬಿಟ್ಟಿದ್ದೇವೆ ಎಂದು ಒಂದು ಸಾಲಿನ ನಿರ್ಣಯ ಮಾಡಿದ್ದೆವು. ಹೈಕಮಾಂಡ್‌ ಹೇಳಿದ ಮಾತಿಗೆ ನಾವು  ಬದ್ಧರಾಗಿದ್ದೇವೆ ಎಂದು ಹೇಳಿದರು.

ಇಂದು ಸಂಜೆ ಏಳು ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ಅಧಿಕೃತವಾಗಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುತ್ತೇವೆ. ಅನಂತರ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

 

Share Post