DistrictsPolitics

ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಸಿಎಂ ಹೇಳೋದೇನು..?

ಮೈಸೂರು; ಕಾಂಗ್ರೆಸ್‌ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಯೋಗೇಶ್ವರ್‌ ಕಾಂಗ್ರೆಸ್‌ ಸೇರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಮೈಸೂರಿನಲ್ಲಿ ಪ್ರಶ್ನೆ ಮಾಡಿದಾಗ, ಅವರ ಜೊತೆ ನಾನು ಇನ್ನೂ ಮಾತನಾಡಿಲ್ಲ.. ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ ಮಾಡುತ್ತೇವೆ ಎಂದಿದ್ದಾರೆ..
ಸಂಡೂರು ಕ್ಷೇತ್ರದಲ್ಲಿ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್‌ ಸಿಗುವುದು ಪಕ್ಕಾಗಿದೆ.. ಉಳಿದ ಎರಡು ಕ್ಷೇತ್ರಗಳಿಗೆ ಟಿಕೆಟ್‌ ಫೈನಲ್‌ ಆಗಬೇಕಿದೆ.. ಇಂದು ಮೂರೂ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..

Share Post