BengaluruPolitics

ದೇವೇಗೌಡರ ಮಾನ ತೆಗೆಯುವಾಗ ಕಾಂಗ್ರೆಸ್ ಒಕ್ಕಲಿಗರು ಎಲ್ಲಿದ್ದರು?

ಬೆಂಗಳೂರು; ದೇವೇಗೌಡರ ಮಾನ ಮರ್ಯಾದೆ ತೆಗೆಯುವಾಗ ಕಾಂಗ್ರೆಸ್ ಒಕ್ಕಲಿಗ ನಾಯಕರು ಎಲ್ಲಿ ಹೋಗಿದ್ದರು ಅಂತ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ ಮಾಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿರುವ ಅವರು ಕಾಂಗ್ರೆಸ್ ಒಕ್ಕಲಿಗ ಶಾಸಕರು ಹಾಗೂ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.. 

  ಒಕ್ಕಲಿಗರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆಂದು ಶಾಸಕ ಮುನಿರತ್ನ ವಿರುದ್ದ ಒಕ್ಕಲಿಗ ಶಾಸಕರು ಹಾಗೂ ಸಚಿವರು ಸಿಎಂ ಗೆ ದೂರು ಕೊಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಕೊಟ್ಟ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. 

ಒಕ್ಕಲಿಗ ನಾಯಕ ದೇವೇಗೌಡರ ಕುಟುಂಬವನ್ನೇ ಮುಳುಗಿಸಬೇಕು ಎಂದು ಹೊರಟವರು ಕಾಂಗ್ರೆಸ್ಸಿಗರು. ಶಾಸಕ ಮುನಿರತ್ನ ವಿರುದ್ಧ ದೂರು ನೀಡಲು ಹೋದ ಕಾಂಗ್ರೆಸ್‌ನ ಒಕ್ಕಲಿಗ ನಾಯಕರಿಗೆ ದೇವೇಗೌಡ ಅವರ ಮಾನ-ಮರ್ಯಾದೆ ತೆಗೆಯುವಾಗ ಎಲ್ಲಿ ಹೋಗಿತ್ತು ಒಕ್ಕಲುತನ ಎಂದು ಪ್ರಶ್ನಿಸಿದರು. 

Share Post