BengaluruNationalPolitics

ಚನ್ನಪಟ್ಟಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು?; ಡಿಕೆ ಹೇಳುತ್ತಿರುವ ಹೆಸರೇನು?

ಬೆಂಗಳೂರು; ಉಪಚುನಾವಣೆಗೆ ರಾಜ್ಯದಲ್ಲಿ ಸಿದ್ಧತೆ ಜೋರಾಗಿ ನಡೆಯುತ್ತಿದೆ.. ಮೂರು ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದರೂ ಎಲ್ಲರ ಗಮನ ಚನ್ನಪಟ್ಟಣ ಮೇಲೆ ನೆಟ್ಟಿದೆ.. ಮೈತ್ರಿ ಅಭ್ಯರ್ಥಿ ಫೈನಲ್ ಮಾಡೋದಕ್ಕೆ ಜೆಡಿಎಸ್, ಬಿಜೆಪಿ ಪಕ್ಷಗಳು ಕಸರತ್ತು ಮಾಡುತ್ತಿವೆ. ಇತ್ತ ಕಾಂಗ್ರೆಸ್ ಕೂಡಾ ತನ್ನ ಅಭ್ಯರ್ಥಿ ಯಾರೆಂದು ಹೇಳದೆ ಕುತೂಹಲ ಹಾಗೆ ಉಳಿಸಿಕೊಂಡಿದೆ.

  ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕೇಳಿದರೆ ಕುತೂಹಲದ ಉತ್ತರ ಕೊಡುತ್ತಾರೆ.. ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಹಸ್ತದ ಗುರುತೆ ಅಭ್ಯರ್ಥಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ನಾವು ಗೆಲ್ಲುವ ಅಭ್ಯರ್ಥಿ ಕಣಕ್ಕೆ ಇಳಿಸುತ್ತೇವೆ ಎಂದು ಹೇಳುವ ಡಿಕೆ ಅಭ್ಯರ್ಥಿ ಹೆಸರನ್ನು ಮಾತ್ರ ಹೇಳುತ್ತಿಲ್ಲ.

 

Share Post