CrimePolitics

ರಾತ್ರಿಯೊಳಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಬಿ.ನಾಗೇಂದ್ರ..?

ಬೆಂಗಳೂರು; ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರದಲ್ಲಿ ಮೊದಲ ವಿಕೆಟ್‌ ಪತನವಾಗುತ್ತಾ..? ಈ ಬಗ್ಗೆ ಗುಸುಗುಸು ಚರ್ಚೆಗಳು ನಡೆಯುತ್ತಿವೆ.. ಈ ವಿಚಾರಲ್ಲಿ ಪ್ರತಿಪಕ್ಷಗಳು ನಿರಂತರ ಹೋರಾಟಗಳು ನಡೆಯುತ್ತಿವೆ.. ಈ ಹಿನ್ನೆಲೆಯಲ್ಲಿ ಮುಜುಗರ ತಪ್ಪಿಸಿಕೊಳ್ಳಲು ತನಿಖೆ ಮುಗಿಯವರೆಗೂ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆಯಲಾಗುತ್ತೆ ಎಂದು ಹೇಳಲಾಗುತ್ತಿದೆ.. ಇಂದು ರಾತ್ರಿಯೊಳಗೆ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ..

ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.. 85 ಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಹಿನ್ನೆಲೆಯಲ್ಲಿ ಈ ಆತ್ಮಹತ್ಯೆ ನಡೆದಿತ್ತು.. ಈ ಹಿನ್ನೆಲೆಯಲ್ಲಿ ಸಚಿವರ ರಾಜೀನಾಮೆಗೆ ಪ್ರತಿಪಕ್ಷಗಳು ಪಟ್ಟು ಹಿಡಿದಿವೆ.. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ತನಿಖೆ ಮುಗಿಯುವವರೆಗೆ ಸಚಿವರ ರಾಜೀನಾಮೆ ಪಡೆಯಲು ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ..

 

 

Share Post