Politics

ಜೆಡಿಎಸ್‌ನೊಂದಿಗೆ ಮೈತ್ರಿ ಇಲ್ಲ : ಯಡಿಯೂರಪ್ಪ ಸ್ಪಷ್ಟನೆ

ಮೈಸೂರು : “ವಿಧಾನಪರಿಷತ್ತಿನ ಮೈಸೂರು – ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಜೆಡಿಎಸ್‌ ಸೇರಿದಂತೆ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ರಾಜೇಂದ್ರ ಕಲಾಮಂದಿರದಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಎಲ್ಲಿ ಜೆಡಿಎಸ್‌ ಸ್ಪರ್ಧಿಸಿಲ್ಲವೋ ಅಲ್ಲಿ ಮಾತ್ರ ನಮಗೆ ಬೆಂಬಲ ಕೊಡಿ ಎಂದು ಕೇಳಿಕೊಂಡಿದ್ದೇವೆ. ಇದರಿಂದ ಮತದಾರರು ಗೊಂದಲಕ್ಕೀಡಾಗಬಾರದು. ಪ್ರಸ್ತುತ ಕ್ಷೇತ್ರದಲ್ಲಿ ಯಾರೊಂದಿಗೂ ಒಳಒಪ್ಪಂದವಾಗಲಿ, ಹೊರ ಒಪ್ಪಂದವಾಗಲಿ ಮಾಡಿಕೊಂಡಿಲ್ಲ ಎಂದು ಹೇಳಿದರು.

Share Post