HealthPolitics

ಬೆಂಗಳೂರಿಗೆ ಆಗಮಿಸಿದ ಕುಮಾರಸ್ವಾಮಿ; ಮಂಡ್ಯ ಅಭ್ಯರ್ಥಿ ಬಗ್ಗೆ ಹೇಳಿದ್ದೇನು..?

ಬೆಂಗಳೂರು; ಮಾರ್ಚ್ 21ರಂದು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಡಿಸ್ ಚಾರ್ಜ್ ಆಗಿದ್ದಾರೆ. ಇದೀಗ ಅವರು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

  ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಕುಮಾರಸ್ವಾಮಿಯವರು, ಈಗ ಚೇತರಿಸಿಕೊಂಡಿದ್ದಾರೆ. ಅವರು ವಿಶೇಷ‌ವಿಮಾನದಲ್ಲಿ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಇದೇ ವೇಳೆ ಮಾತನಾಡಿದ ಅವರು, ಇದು ನನಗೆ ಪುನರ್ಜನ್ಮ ಎಂದು ಹೇಳಿದ್ದಾರೆ.

  ನನಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಲೆಂದು ನಾಡಿನಾದ್ಯಂತ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದ್ದರು. ಅದು ಫಲ ಕೊಟ್ಟಿದೆ. ಸಾಯಿಬಾಬಾನೇ ಬಂದು ಆಪರೇಷನ್ ಮಾಡಿದ್ದಾರೆ ಎಂದು ವೈದ್ಯರೇ ಹೇಳಿದ್ದಾರೆ ಅಂತ ಕುಮಾರಸ್ವಾಮಿ ಹೇಳಿದ್ದಾರೆ. ಮೂರು, ನಾಲ್ಕು ದಿನ ವಿಶ್ರಾಂತಿ ಪಡೆಯುತ್ತೇನೆ. ನಂತರ ಸಕ್ರಿಯ ರಾಜಕಾರಣಕ್ಕೆ ಮರಳುತ್ತೇನೆ ಎಂದೂ ಕುಮಾರಸ್ವಾಮಿ ಹೇಳಿದ್ದಾರೆ.

 ಎರಡು ಬಾರಿ ಲೋಪದೋಷ ಆಗಿತ್ತು. ಈಗ ಭಗವಂತ ನನ್ನನ್ನು ಕಾಪಾಡಿದ್ದಾನೆ. ಮೂರನೇ ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಆಗಿದೆ. ವೈದ್ಯರು ಸಾಯಿಬಾಬಾ ಭಕ್ತರು. ಸಾಯಿಬಾಬನಿಗೆ ಪೂಜೆ ಸಲ್ಲಿಸಿ ಬಂದು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಮತ್ತೊರ್ವ ವೈದ್ಯ ಹಂಗೇರಿಯಾದವರು. ಅವರು ನನಗೆ ಮರುಜನ್ಮ ನೀಡಿದ್ದಾರೆ. ನನ್ನ ಕೈಲಾದ ರೀತಿ ಚುನಾವಣೆ ಪ್ರಚಾರದಲ್ಲಿ ತೊಡಗುತ್ತೇನೆ. ಮೂರು ನಾಲ್ಕು ದಿನದಲ್ಲಿ ಮಂಡ್ಯ ಅಭ್ಯರ್ಥಿ ಫೈನಲ್ ಆಗಲಿದೆ ಎಂದು ಕುಮಾರಸ್ವಾಮಿ ಇದೇ ವೇಳೆ ತಿಳಿಸಿದರು.

 

Share Post