Uncategorized

ಸರ್ವರಿಗೂ ಉದ್ಯೋಗ ಕಾರ್ಯಕ್ರಮ ರಾಜ್ಯದಲ್ಲಿ ಜಾರಿ; ಸಿಎಂ ಬೊಮ್ಮಾಯಿ

ಬೆಳಗಾವಿ: ರಾಜ್ಯದಲ್ಲಿ ಶೀಘದಲ್ಲೇ ಸರ್ವರಿಗೂ ಉದ್ಯೋಗ ನೀಡುವ ಉದ್ದೇಶದಿಂದ ಉದ್ಯೋಗಿ ನೀತಿ ಜಾರಿಗೆ ತರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯ ಉದ್ಯಮಬಾಗ್‌ನ ಜಿಐಟಿಯಲ್ಲಿ ಆಯೋಜಿಸಿದ್ದ ‘ಬೆಳಗಾವಿ ಉದ್ಯೋಗ ಮೇಳ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಉದ್ಯೋಗ ಮಾರ್ಗದರ್ಶನ, ವ್ಯಕ್ತಿತ್ವ ವಿಕಸನ ಹಾಗೂ ಕೌಶಲ ತರಬೇತಿ ಇಂದಿನ ಯುವಕರಿಗೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ, ರಚನಾತ್ಮಕ ಉದ್ಯೋಗ ನೀತಿ ಬೇಕು. ಇತರ ರಾಜ್ಯಗಳಲ್ಲಿ ಕೈಗಾರಿಕಾ ನೀತಿಯಷ್ಟೆ ಇದೆ. ದೇಶದಲ್ಲೇ ಮೊದಲ ಬಾರಿಗೆ ಉದ್ಯೋಗ ನೀತಿ ತರಲಿದ್ದೇವೆ ಎಂದು ಹೇಳಿದರು.

ನನ್ನ ಸರ್ಕಾರ ರಾಜ್ಯದ ಜನರ‌ ಭವಿಷ್ಯ ರೂಪಿಸುವ ಉದ್ದೇಶ ಹೊಂದಿದೆ. ಅದನ್ನು ಎಲ್ಲ ಕಾರ್ಯಕ್ರಮಗಳಲ್ಲೂ‌ ನಿರೂಪಿಸಿ ತೋರಿಸುತ್ತೇವೆ. ಎಲ್ಲಾ ಜಿಲ್ಲೆಗಳಲ್ಲೂ ಉದ್ಯೋಗ ಮೇಳ ನಡೆಸಲಾಗುವುದು ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.

Share Post