HealthUncategorized

ಇಂದು ರಾಜ್ಯದಲ್ಲಿ 40,499 ಮಂದಿಗೆ ಸೋಂಕು; 21 ಮಂದಿ ಸಾವು..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಪ್ರತಿದಿನ ಸಾವಿರಾರು ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 40,499 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈವತ್ತೂ ಕೂಡಾ ಬೆಂಗಳೂರಿನದ್ದೇ ಸಿಂಹಪಾಲು. ಬೆಂಗಳೂರಿನಲ್ಲಿ 24,135 ಮಂದಿಗೆ ಸೋಂಕು ತಗುಲಿದೆ. ಇಂದು ರಾಜ್ಯದಲ್ಲಿ ಕೊರೊನಾಗೆ 21 ಮಂದಿ ಮೃತಪಟ್ಟಿದ್ದು, ಅದ್ರಲ್ಲಿ ಬೆಂಗಳೂರಿನ ಏಳು ಮಂದಿ ಸೇರಿದ್ದಾರೆ. 

ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಟ್ವೀಟ್‌ ಮಾಡಿದ್ದಾರೆ. ರಾಜ್ಯದಲ್ಲಿ ಇಂದು 23,209 ಮಂದಿ ಗುಣಮುಖರಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಬಹುತೇಕರು ಕೂಡಾ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 2,67,650 ಸಕ್ರಿಯ ಪ್ರಕರಣಗಳಿದ್ದು, ಇವತ್ತು 2,15,312 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.

Share Post