DistrictsHealthUncategorized

ಮಂಡ್ಯ 5 ರೂಪಾಯಿ ವೈದ್ಯರಿಗೆ ಲಘು ಹೃದಯಾಘಾತ; ಆಸ್ಪತ್ರೆಗೆ ದಾಖಲು

ಮೈಸೂರು; ಮಂಡ್ಯದಲ್ಲಿ ಐದು ರೂಪಾಯಿ ಡಾಕ್ಟರ್‌ ಎಂದೇ ಪ್ರಖ್ಯಾತಿ ಗಳಿಸಿರುವ ಡಾ.ಶಂಕರೇಗೌಡ ಅವರಿಗೆ ಲಘು ಹೃದಯಾಘಾತ ಆಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಹೃದಯದ ರಕ್ತನಾಳಗಳು ಬ್ಲಾಕ್‌ ಆಗಿದ್ದರಿಂದ ಲಘು ಹೃದಯಾಘಾತ ಆಗಿದೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಶಂಕರೇಗೌಡ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯವಾಗಿದ್ದಾರೆಂದು ತಿಳಿದು ಬಂದಿದೆ. ಆದ್ರೆ ಅವರಿಗೆ ಬೈಪಾಸ್‌ ಸರ್ಜರಿ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆಂಬ ಮಾಹಿತಿ ಇದೆ.

ಒಂದು ವಾರದ ನಂತರ ಶಂಕರೇಗೌಡ ಅವರಿಗೆ ಬೈಪಾಸ್‌ ಸರ್ಜರಿ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ. ಅಲ್ಲಿಯವರೆಗೂ ಶಂಕರೇಗೌಡ ಅವರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

Share Post