Uncategorized

ಚನ್ನಪಟ್ಟಣಕ್ಕೆ ನಿಖಿಲ್‌ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿ!

ಬೆಂಗಳೂರು; ಕೊನೆಗೂ ಚನ್ನಪಟ್ಟಣದ ಮೈತ್ರಿ ಅಭ್ಯರ್ಥಿ ಹೆಸರು ಫೈನಲ್‌ ಆಗಿದೆ.. ನಿಖಿಲ್‌ ಕುಮಾರಸ್ವಾಮಿಯವರನ್ನೇ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.. ಈ ಬಗ್ಗೆ ಅಧಿಕೃತ ಪ್ರಕಟಣೆಯೊಂದೇ ಬಾಕಿ ಇದೆ.. 

ಸಿ.ಪಿ.ಯೋಗೇಶ್ವರ್‌ ಅವರು ಕಾಂಗ್ರೆಸ್‌ ಸೇರಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿದ್ದಾರೆ.. ಯೋಗೇಶ್ವರ್‌ ವಿರುದ್ಧ ಸ್ಪರ್ಧೆ ಮಾಡೋದಕ್ಕೆ ನಿಖಿಲ್‌ ಕುಮಾರಸ್ವಾಮಿ ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗಿತ್ತು.. ಆದ್ರೆ, ಇದೀಗ ಜೆಡಿಎಸ್‌ ನಾಯಕರು ನಿಖಿಲ್‌ ಕುಮಾರಸ್ವಾಮಿಯವರನ್ನೇ ಅಭ್ಯರ್ಥಿ ಮಾಡಲು ತೀರ್ಮಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ..

ನಿಖಿಲ್‌ ಕುಮಾರಸ್ವಾಮಿಯವರು ಈಗಾಗಲೇ ಮಂಡ್ಯ ಲೋಕಸಭೆ ಹಾಗೂ ರಾಮನಗರ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ.. ಈಗ ಅವರು ಮೂರನೇ ಚುನಾವಣೆ ಎದುರಿಸಬೇಕಿದೆ.. ಪ್ರಬಲ ಯೋಗೇಶ್ವರ್‌ ವಿರುದ್ಧ ಅವರು ತೊಡೆತಟ್ಟಬೇಕಿದೆ.. ಈ ಚುನಾವಣೆಯಲ್ಲಿ ಗೆದ್ದರೆ ಮಾತ್ರ ಅವರಿಗೆ ಅನುಕೂಲ.. ಮೂರನೇ ಭಾರಿಯೂ ಸೋತರೆ ಅವರ ರಾಜಕೀಯ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.. ಆದರೂ ಕೂಡಾ ಧೈರ್ಯ ಮಾಡಿ ನಿಖಿಲ್‌ ರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ..

Share Post