Uncategorized

ಪೊಲೀಸ್‌ ಅಧಿಕಾರಿ ಹಿಟ್‌ ಅಂಡ್‌ ರನ್‌; ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿ ಸಾವು

ಮಂಡ್ಯ: ಪೊಲೀಸ್‌ ಅಧಿಕಾರಿಯೊಬ್ಬರು ಬೇಕಾಬಿಟ್ಟಿ ಕಾರು ಓಡಿಸಿದ್ದರ ಪರಿಣಾಮ ವಿದ್ಯಾರ್ಥಿಯೊಬ್ಬ ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿರುವ ಘಟನೆ ಮಂಡ್ಯದ ಮಳವಳ್ಳಿಯಲ್ಲಿ ನಡೆದಿದೆ. ರಾಗಿ ಬೊಮ್ಮನಹಳ್ಳಿ ಗ್ರಾಮದ ಶಿವಕುಮಾರ್ ಹಾಗೂ ಗೀತಾ ದಂಪತಿ ಪುತ್ರ ಶರತ್ (19) ಎಂಬಾತನೆ ಸಾವನ್ನಪ್ಪಿದ್ದ ವಿದ್ಯಾರ್ಥಿ. 

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಶರತ್, ಶಶಾಂಕ್ ಹಾಗೂ ಸುದರ್ಶನ್ ಎಂಬ ಮೂವರು ವಿದ್ಯಾರ್ಥಿಗಳ ರಸ್ತೆಯಲ್ಲಿ ನಡೆದು ಹೋಗುತ್ತಿದ್ದರು. ಇದೇ ವೇಳೆ ಕಾರು ಚಾಲನೆ ಮಾಡಿಕೊಂಡು ಬಂದ ಪೊಲೀಸ್‌ ಅಧಿಕಾರಿ ಬಿಕಾಂ ಓದುತ್ತಿರುವ ಶರತ್‌, ಇತರ ಇಬ್ಬರಿಗೆ ಡಿಕ್ಕಿ ಹೊಡೆದಿದ್ದಾರೆ. ನಂತರ ಕಾರನ್ನು ಸ್ಪೀಡಾಗಿ ಚಾಲನೆ ಮಾಡಿ, ಕೊಂಚ ದೂರದಲ್ಲಿ ಕಾರು ನಿಲ್ಲಿಸಿ ಪರಾರಿಯಾಗಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನೂ ನಿನ್ನೆಯೇ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶರತ್‌ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಮಳವಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post