BengaluruHealthUncategorized

ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ನಿರ್ಬಂಧವಿಲ್ಲ; ಸಿಎಂ

ಬೆಂಗಳೂರು; ಕರ್ನಾಟಕದಲ್ಲಿ ಕೋವಿಡ್ ಆತಂಕ ಶುರುವಾಗಿದ್ದು, ಈ ಬಗ್ಗೆ ಇಂದು (ಡಿಸೆಂಬರ್ 21) ಗೃಹ ಕಚೇರಿ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದರು.

 

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಈಗಾಗಲೇ ಆರೋಗ್ಯ ಸಚಿವರು ಸಭೆ ಮಾಡಿದ್ದಾರೆ. Tac ಜೊತೆ ಚರ್ಚೆ ಮಾಡಿ ಅವರ ಸಲಹೆ ತೆಗೆದುಕೊಂಡಿದ್ದೇವೆ. ಯಾವುದೇ ಕಾರಣಕ್ಕೂ ಹಿಂದೆ ಮಾಡಿದ ತಪ್ಪುಗಳು ಮರುಕಳಿಸಬಾರದು ಎಂದು ಅಧಿಕಾರಿಗೆ ಸೂಚನೆ ನೀಡಿದ್ದೇನೆ. ಆಕ್ಸಿಜನ್, ಬೆಡ್ ಸಮಸ್ಯೆ ಬರಬಾರದು ಎಂದು ಹೇಳಿದ್ದೇನೆ ಎಂದರು.

 

ಬೇರೆ ಖಾಯಿಲೆಗಳನ್ನ ಗಂಭೀರವಾಗಿ ಪರಿಗಣಿಸಿ ಚಿಕಿತ್ಸೆಗೆ ಸೂಚಿಸಿದ್ದೇನೆ ಎಂದರು. ಇನ್ನು ಇದೇ ವೇಳೆ ಕ್ರಿಸ್​ಮಸ್​, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

Share Post