DistrictsPoliticsUncategorized

ಜನಾರ್ದನರೆಡ್ಡಿ ಹೊಸ ಪಕ್ಷ ಕಟ್ಟೋದಿಲ್ಲ; ಶ್ರೀರಾಮುಲು ಸ್ಪಷ್ಟನೆ

 

ಯಲ್ಲಾಪುರ; ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಪಕ್ಷ ಕಟ್ಟುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಜೊತೆಗೆ ಸಚಿವ ಶ್ರೀರಾಮುಲು ಈ ಬಗ್ಗೆ ಮುನಿಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಶ್ರೀರಾಮುಲು ಈ ಬಗ್ಗ ಸ್ಪಷ್ಟನೆ ಕೊಟ್ಟಿದ್ದಾರೆ. ಯಲ್ಲಾಪುರದಲ್ಲಿ ಮಾತನಾಡಿರುವ ಅವರು, ಜನಾರ್ದನರೆಡ್ಡಿಯವರು ಹೊಸ ಪಕ್ಷ ಕಟ್ಟೋದಿಲ್ಲ. ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಅವರ ಪಾತ್ರವೂ ಇದೆ. ಹೀಗಾಗಿ ಅವರು ಬಿಜೆಪಿಯೊಳಗೇ ಇರುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮಾಗೋಡಿನಲ್ಲಿ ಸಿದ್ದಿ ಸಮುದಾಯದವರ ಮನೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶ್ರೀರಾಮುಲು ಈ ಬಗ್ಗೆ ಮಾತನಾಡಿದರು. ಒಂದು ವೇಳೆ ಜನಾರ್ದನರೆಡ್ಡಿಯವರು ಪಕ್ಷ ಕಟ್ಟಿದರೆ ನಾನೇನೂ ಮಾಡೋದಕ್ಕೆ ಆಗೋದಿಲ್ಲ. ಸ್ನೇಹ ಬೇರೆ ಪಕ್ಷ ಬೇರೆ. ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಸ್ನೇಹ ಮತ್ತು ಪಕ್ಷ ಎರಡನ್ನೂ ಒಟ್ಟಾಗಿಯೇ ಇರುವಂತೆ ಮಾಡ್ತೇನೆ ಅಂತ ಹೇಳಿದ್ದಾರೆ.

Share Post