DistrictsPoliticsUncategorized

ಅತ್ಯಾಚಾರ ಆರೋಪಿಗೆ ಕಾಂಗ್ರೆಸ್‌ ಟಿಕೆಟ್‌; ದಾಖಲೆ ಕೊಡ್ತೀನಿ ಎಂದ S.T.ಸೋಮಶೇಖರ್

ಮಂಡ್ಯ: ಅತ್ಯಾಚಾರ ಆರೋಪಿಗೆ ಕಾಂಗ್ರೆಸ್‌ ಪರಿಷತ್‌ ಚುನಾವಣೆಯಲ್ಲಿ ಟಿಕೆಟ್‌ ನೀಡಿದೆ ಎಂದು ಸಚಿವ ಸೋಮಶೇಖರ್‌ ಮತ್ತೊಮ್ಮೆ ಆರೋಪಿಸಿದ್ದಾರೆ. ಈ ಸಂಬಂಧ ಡಿಸೆಂಬರ್‌ 2 ಅಥವಾ 3 ರಂದು ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆಂದೂ ಹೇಳಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ವಿಧಾನಪರಿಷತ್‌ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಟಿಕೆಟ್‌ ನೀಡಿರುವ ಕೆಜಿಎಫ್‌ ಬಾಬು ಅವರ ವಿರುದ್ಧ ಬೆಂಗಳೂರಿನಲ್ಲಿ ಅತ್ಯಾಚಾರ ದೂರು ದಾಖಲಾಗಿದೆ. ಅಂತಹವರಿಗೆ ಕಾಂಗ್ರೆಸ್‌ ಪಕ್ಷ ಟಿಕೆಟ್‌ ನೀಡಿದೆ ಎಂದು ಆರೋಪಿಸಿದರು.

ಇದಕ್ಕೆ ಸೂಕ್ತ ದಾಖಲೆಗಳು ನನ್ನ ಬಳಿ ಇವೆ. ಅವುಗಳನ್ನು ಡಿಸೆಂಬರ್‌ 2 ಅಥವಾ 3ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

Share Post