DistrictsPoliticsUncategorized

ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ಕೇಂದ್ರ ಗೃಹಸಚಿವ ಅಮಿತ್‌ ಶಾ

ಬಳ್ಳಾರಿ; ಕಾಂಗ್ರೆಸ್‌ ಒಂದು ತುಕಡೆ ತುಕಡೆ ಗ್ಯಾಂಗ್‌ ಎಂದು ಕೇಂದ್ರಗೃಹ ಸಚಿವ ಅಮಿತ್‌ ಶಾ ಆರೋಪ ಮಾಡಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಅವರು ಮಾತನಾಡಿದರು.

ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅಮಿತ್‌ ಶಾ, ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ. ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಧೂಳೀಪಟವಾಗಲಿವೆ ಎಂದು ಭವಿಷ್ಯ ನುಡಿದರು. 2018ರ ಚುನಾವಣೆಯಲ್ಲಿ ಬಿಎಸ್‍ವೈ ನೇತೃತ್ವದಲ್ಲಿ ಚುನಾವಣೆಗೆ ಹೋಗಿದ್ದೆವು. ಆದರೆ ಸ್ವಲ್ಪದರಲ್ಲಿ ಅಧಿಕಾರ ನಮ್ಮ ಕೈತಪ್ಪಿತು. ನಂತರ ನಮಗೆ ಅಧಿಕಾರ ಸಿಕ್ಕಿತು. ಈಗ ಮತ್ತೆ ನಾವೇ ಗೆಲ್ಲುತ್ತೇವೆ ಎಂದರು.

ಅಮಿತ್ ಶಾ ಸಮಾವೇಶ ಮುಗಿಸಿ ಕರ್ನಾಟಕ ಸೇವಾ ಸಂಘದಲ್ಲಿ ಕೋರ್ ಕಮಿಟಿ ಸಭೆ ನಡೆಸಿದರು. ಬಳ್ಳಾರಿ ವಿಭಾಗದ ನಾಲ್ಕು ಜಿಲ್ಲೆಯ 60 ಪ್ರಮುಖರು, ಟಿಕೆಟ್ ಆಕಾಂಕ್ಷಿಗಳ ಜೊತೆ ಸಭೆ ನಡೆಸಿದರು. ಚುನಾವಣೆಯಲ್ಲಿ ಗೆಲುವಿನ ಬಗ್ಗೆ ಚರ್ಚೆ ನಡೆಸಿದರು.

Share Post