BengaluruUncategorized

Hijab Row: ವಿವಾದ ಚಿಗುರೊಡೆಯುವ ಮುನ್ನ ಚಿವುಟಿ ಹಾಕಬೇಕಿತ್ತು-ದೇವೇಗೌಡರು

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿಚಾರದಲ್ಲಿ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರ ಆರಂಭ ಆಗ್ತಾ ಇದ್ದ ಹಾಗೇ ಅದನ್ನು ಚಿವುಟಿ ಹಾಕುವ ಕೆಲಸ ಮಾಡಬೇಕಿತ್ತು. ಅದನ್ನು ಎರಡೂ ರಾಷ್ಟ್ರೀಯ ಪಕ್ಷಗಳೂ ಮಾಡಬೇಕಿತ್ತು. ಅದನ್ನು ಬಿಟ್ಟು ಪ್ರಚೋದನೆ ಮಾಡುವ ಕೆಲಸ ಮಾಡ್ತಿದ್ದಾರೆ. ಹಾಗಾಗಿ ವಿಚಾರ ವಿವಾದವಾಗಿ ಮಾರ್ಪಾಡಾಗಿದೆ ಎಂದು ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ  ಹೆಚ್ ಡಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ವಿವಾದ ನ್ಯಾಯಾಲಯದಲ್ಲಿದೆ.  ಕೋರ್ಟ್ ಏನು ತೀರ್ಪು ಕೊಡುತ್ತೋ ಅದನ್ನು ಎಲ್ಲರೂ ಒಪ್ಪಬೇಕು. ಹೈಕೋರ್ಟ್ ನಲ್ಲಿ ಏನೂ ತೀರ್ಮಾನವಾಗುತ್ತದೆ ಆ ಬಗ್ಗೆ ನಾನೇನೂ ಮಾತನಾಡುವುದಿಲ್ಲ ಒಂದು ಬಾರಿ ನ್ಯಾಯಾಲಯ ತೀರ್ಪು ಕೊಟ್ಟರೆ ಮತ್ತೆ ನಾವು ಪ್ರಶ್ನೆ ಮಾಡಬಾರದು. ಅದನ್ನು ಪಾಲನೆ ಮಾಡಬೇಕು ಎಂದರು.

Share Post